ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಅಂಬ್ಲಮೊಗರು: ಅಂಬ್ಲಮೊಗರು ಕೋಟ್ರಗುತ್ತು ಶ್ರೀ ಲಕ್ಷ್ಮಿನರಸಿಂಹ ಸೇವಾ ಸಮಿತಿ ಇದರ ಅಧ್ಯಕ್ಷರಾಗಿ ಸುಕುಮಾರ್. ಎ. ಸಾಲ್ಯಾನ್ ಆಯ್ಕೆಯಾಗಿದ್ದಾರೆ.
ಕೊಟ್ರಗುತ್ತು ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನದಲ್ಲಿ ನಡೆದ ಸಮಿತಿಯ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಶ್ಯಾಂ ಸುಂದರ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಜೇಶ್ ಆಚಾರ್ಯ, ಶರತ್ ಕುಮಾರ್, ಪ್ರ. ಕಾರ್ಯದರ್ಶಿಯಾಗಿ ದಿವಾಕರ ಬಂಗೇರ, ಕೋಶಾಧಿಕಾರಿಯಾಗಿ ಪ್ರಕಾಶ್ ಜಿ.ಎಸ್., ಜೊತೆ ಕಾರ್ಯದರ್ಶಿಯಾಗಿ ದಯಾನಂದ ಬೆಳ್ಚಾಡ, ಶಿವರಾಜ್ ಎನ್. ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಜಗದೀಶ್ ಆಚಾರ್ಯ, ವಾರ್ಷಿಕ ಕಾರ್ಯಕ್ರಮದ ಸಂಘಟಕರಾಗಿ 14 ಸದಸ್ಯರು ಮತ್ತು ಗೌರವ ಸಲಹೆಗಾರರಾಗಿ 15 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ದೇವಸ್ಥಾನದ ಮೊಕ್ತೇಸರ ಪದ್ಮನಾಭ ರೈ ಕೋಟ್ರಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಪಡ್ಯಾರ ಮನೆ ಉಪಸ್ಥಿತರಿದ್ದರು