Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಕೌಶಲ್ಯವಿದ್ದರೆ ಉನ್ನತ ಸಂಸ್ಥೆಗಳಲ್ಲಿ ಉದ್ಯೋಗ : ಡಾ. ಮಹೇಶಪ್ಪ

UllalaVaniBy UllalaVaniAugust 4, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ : ತಾಂತ್ರಿಕ ಶಿಕ್ಷಣದಲ್ಲಿ ಪ್ರತಿಭೆಯೊಂದಿಗೆ ನಿರಂತರ ಕಲಿಕೆ, ಕೌಶಲ್ಯವೃದ್ಧಿಸಿಕೊಂಡರೆ ಮಾತ್ರ ಉನ್ನತ ಸಂಸ್ಥೆಗಳಲ್ಲಿ ಉದ್ಯೋಗವನ್ನು ಗಳಿಸಲು ಸಾಧ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಕೌಶಲ್ಯವನ್ನು ವೃದ್ಧಿಸಿಕೊಳ್ಳುವ ಕಾರ್ಯ ಮಾಡಬೇಕು ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಉಪಕುಲಪತಿ ಡಾ. ಮಹೇಶಪ್ಪ ಅಭಿಪ್ರಾಯಪಟ್ಟರು.

ಅವರು ಕೊಣಾಜೆ ನಡುಪದವಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾರಂಬೋತ್ಸವ `ಫ್ರೆಶರ್ಸ್ ಡೇ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

IMG_3922

IMG_3954

IMG_3965

IMG_3968

IMG_3932_1

ದಶಕಗಳ ಹಿಂದೆ ಶೈಕ್ಷಣಿಕವಾಗಿ ಬಹಳಷ್ಟು ಪ್ರತಿಭಾವಂತರಾಗಿದ್ದರೂ ಉದ್ಯೋಗ ಅರಸುತ್ತಾ ದೇಶ ವಿದೇಶಗಳೀಗೆ ಹೋಗುವ ಅನಿವಾರ್ಯತೆ ಇತ್ತು. ಆದರೆ ಬದಲಾದ ದಿನಗಳಲ್ಲಿ ಬೃಹತ್ ಸಂಸ್ಥೆಗಳು ಕಾಲೇಜಿನ ಕ್ಯಾಂಪಸ್‍ಗೆ ಬಂದು ಉದ್ಯೋಗವಕಾಶ ಕೊಡುತ್ತಿದೆ. ಆದರೆ ಪ್ರತಿಭಾವಂತರಾಗಿದ್ದರೆ ಮಾತ್ರ ತಕ್ಷಣವೇ ಉದ್ಯೋಗ ತಮ್ಮದಾಗಿಸಿಕೊಳ್ಳಲು ಸಾಧ್ಯ ಎಂದ ಅವರು ಪಿ.ಎ.ಯಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಮೂಲಭೂತ ಸೌಕರ್ಯ, ಉನ್ನತ ಬೋಧಕ ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ಉನ್ನತ ಕೌಶಲ್ಯವನ್ನು ವೃದ್ಧಿಸಿಕೊಳ್ಳಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಪಿ.ಎ.ಇಂಜಿಯರಿಂಗ್ ಕಾಲೇಜು ಅಧ್ಯಕ್ಷ ಡಾ.ಪಿ.ಅಬ್ದುಲ್ಲಾ ಇಬ್ರಾಹಿಂ ಮಾತನಾಡಿ, ಕಾಲೇಜಿನಲ್ಲಿ ಕಲಿಕೆಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ದೊಡ್ಡ ಕನಸಿನೊಂದಿಗೆ, ಉನ್ನತ ಸ್ಥಾನಕ್ಕೇರುವ ನಿಟ್ಟಿನಲ್ಲಿ ಸಿಕ್ಕಿದ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ದೇರಳಕಟ್ಟೆಯ ಯೇನೆಪೋಯ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಕೆ.ಪಿ.ಜಯರಾಜನ್ ಮಾತನಾಡಿ, ವಿದ್ಯಾರ್ಥಿಗಳು ಕನಸು ಕಂಡರೆ ಸಾಲದು. ಅದನ್ನು ಈಡೇರಿಸಲು ಪ್ರಯತ್ನಿಸಬೇಕು. ಶಿಕ್ಷಣವನ್ನು ಮೂಲ ಧ್ಯೇಯವನ್ನಾಗಿಸಿಕೊಳ್ಳಬೇಕು. ಅಡೆತಡೆಗಳು ಬರುವುದು ಸಾಮಾನ್ಯ. ಆದರೆ ಅದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಮುಖ್ಯ. ಹಾಗಿದ್ದರೆ ನಮ್ಮ ಉದ್ದೆಶಿತ ಗುರಿಯೆಡೆಗೆ ಮುಟ್ಟಲು ಸಾಧ್ಯ ಎಂದರು.

ಮಂಗಳೂರಿನ ಎ.ಜೆ. ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ರವೀಶ್ ತುಂಗ ಎ, ಉಪ ಪ್ರಾಂಶುಪಾಲ ಡಾ. ರಮೀಝ್ ಎಂ.ಕೆ., ಅಕಾಡೆಮಿಕ್ ಡೈರೆಕ್ಟರ್ ಪ್ರೊ. ಸರ್ಫರಾಜ್ ಹಾಸಿಂ ಜೆ, ಆಡಳಿತಾ„ಕಾರಿ ಡಾ.ಆರ್. ಜಿ.ಡಿ.ಸೋಜ, ಕೆ.ಎಂ.ಹನೀಫ್, ಪಿ.ಎ.ಲತೀಫ್, ಎಂಬಿಎ ವಿಭಾಗದ ಡಾ.ಬೀರನ್ ಮೊಯ್ದೀನ್ ಉಪಸ್ಥಿತರಿದ್ದರು.

ಪ್ರೊ. ಎ.ಕೆ.ಕುಲಕರ್ಣಿ, ಬಯೋಟೆಕ್ನಾಲಜಿ ವಿಭಾಗದ ಡಾ. ಕೃಷ್ಣ ಪ್ರಸಾದ್, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಡಾ. ರಾಜೇಶ್ ಜಿ. ಡಿಸೋಜ, ಸಿಎಸ್/ಐಎಸ್ ವಿಭಾಗದ ಡಾ.ಶರ್ಮಿಳಾ ಕುಮಾರಿ, ಇಸಿ/ಟಿಇ ವಿಭಾಗದ ಪ್ರೊ .ಅಬ್ದುಲ್ಲಾ ಗುಬ್ಬಿ ಮಾಹಿತಿ ನೀಡಿದರು.

ಪಿ.ಎ.ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಅಬ್ದುಲ್ ಶರೀಫ್ ಸ್ವಾಗತಿಸಿದರು. ಮಸೀದಿ ಇಮಾಮ್ ಇಝಾಝುದ್ದೀನ್ ಕೌಸರಿ ಕಿರಾಅತ್ ಓದಿದರು. ಡಾ.ಶಾಂತಕುಮಾರಿ ವಂದಿಸಿದರು. ವಿದ್ಯಾರ್ಥಿಗಳಾದ ಅಬ್ದುಲ್ ಅಹದ್ ಶೇಖ್ ಹಾಗೂ ಹಫ್ಸಾ ಯಾಕೂಬ್ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ತಿಂದ  ಹರೇಕಳ ನಿವಾಸಿ ಪೊಲೀಸ್‌ ಪೇದೆ ಚಿಕಿತ್ಸೆ ಫಲಕಾರಿಯಾಗದೆ ಸಾವು

July 28, 2025

ಮಂಗಳೂರು ವಿವಿ 6 ನೇ ಸೆಮಿಸ್ಟರ್ ಪದವಿ ಫಲಿತಾಂಶ ಪ್ರಕಟ

July 22, 2025

ನಿಧನ ಇಸ್ಮಾಯೀಲ್ ಕುಕ್ಕಾಜೆ

July 19, 2025
Leave A Reply

ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ತಿಂದ  ಹರೇಕಳ ನಿವಾಸಿ ಪೊಲೀಸ್‌ ಪೇದೆ ಚಿಕಿತ್ಸೆ ಫಲಕಾರಿಯಾಗದೆ ಸಾವು

By UllalaVaniJuly 28, 20250

ಹರೇಕಳ :  ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್‌…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

July 28, 2025

ಸೈಂಟ್ ಜೋಸೆಫ್ ವಿವಿ, ಬೆಂಗಳೂರು ಅಡ್ವಾನ್ಸ್ಡ್ ಕಂಪ್ಯೂಟಿ0ಗ್ ವಿಭಾಗ – ಸಿಗ್ಮಾ ಸ್ಕ್ವೇರ್ಡ್ ಮತ್ತು ಅನಾಲಿಟಿಕಾ ಸಂಸ್ಥೆಗಳ ಪದಗ್ರಹಣ ಸಮಾರಂಭ

July 28, 2025

ಮೈಕಲ್ ಡಿ ಸೊಜಾ – ಸಿಒಡಿಪಿ ಎಡ್ಯುಕೇರ್ ಬಡ್ಡಿರಹಿತ ಸಾಲರೂಪದ ವಿದ್ಯಾರ್ಥಿವೇತನ ವಿತರಣೆ

July 28, 2025
1 2 3 … 1,541 Next
Automatic YouTube Gallery

ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು

ತೊಕ್ಕೊಟ್ಟು: ಹಿರಿಯ ಬಿಜೆಪಿ
ಮುಖಂಡೆ ಅಂಗಡಿಯಿಂದ ಕಳವು
#ullalavani #news #ullala #kannadanews #mangalore #breakingnews #thokkottu
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
Now Playing
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು #ullalavani #news ...
ತೊಕ್ಕೊಟ್ಟು: ಹಿರಿಯ ಬಿಜೆಪಿ
ಮುಖಂಡೆ ಅಂಗಡಿಯಿಂದ ಕಳವು
#ullalavani #news #ullala #kannadanews #mangalore #breakingnews #thokkottu
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ
Now Playing
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ ...
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ
#ullalavani #news #ullala #kannadanews #breakingnews
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications