Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ನರಿಂಗಾನ

ನರಿಂಗಾನ: ಸೌರ್ಕುಡೇಲು ಕಿರು ಸೇತುವೆಗೆ ಶಿಲಾನ್ಯಾಸ

UllalaVaniBy UllalaVaniMarch 2, 2015Updated:March 2, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

1ullal BRIDGE

ಉಳ್ಳಾಲ: ಯಾವುದೇ ಪ್ರದೇಶದ ಅಭಿವೃದ್ಧಿ ಆಗಬೇಕಾದರೆ ಆ ಭಾಗದ ಜನತೆ ಹಾಗೂ ಜವಾಬ್ದಾರಿಯುತ ಸಂಘ ಸಂಸ್ಥೆಗಳು ಸಂಘಟನೆಗಳ ಪಾತ್ರ ಬಹು ಮುಖ್ಯ. ಆ ನಿಟ್ಟಿನಲ್ಲಿ ನರಿಂಗಾನ ಗ್ರಾಮದ ಸೌರ್ಕುಡೇಲಿನಲ್ಲಿ ನೂತನ ಕಿರು ಸೇತುವೆ ನಿರ್ಮಾಣಕ್ಕಾಗಿ ಸಂಘ ಸಂಸ್ಥೆಗಳು ಹಾಗೂ ಇಲ್ಲಿನ ಜನರು ವಿವಿಧ ರೀತಿಯಲ್ಲಿ ಶ್ರಮಿಸಿದ್ದಾರೆ. ನೂತನ ಸೇತುವೆ ನಿರ್ಮಾಣದ ಮೂಲಕ ಅವರೆಲ್ಲರ ನಿರೀಕ್ಷೆ ಶೀಘ್ರದಲ್ಲಿ ಈಡೇರಲಿದ್ದು, ಈ ಯೋಜನೆಗೆ ಸಹಕರಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ರಾಜ್ಯಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಆಭಿಪ್ರಾಯಪಟ್ಟರು.
ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್‍ನಿಂದ ತೌಡುಗೋಳಿ ಸಂಪರ್ಕ ರಸ್ತೆಯ ಸರ್ಕುಡೇಲಿನಲ್ಲಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಿರು ಸೇತುವೆಗೆ ಭಾನುವಾರ ಶಿಲಾನ್ಯಾಸಗೈದು ಅವರು ಮಾತನಾಡಿದರು.
ನರಿಂಗಾನ ಭಾಗದ ಅತಿಮುಖ್ಯ ಸೇತುವೆ ಸರ್ಕುಡೇಲು ಸೇತುವೆ ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ಪ್ರಮುಖ ಕೊಂಡಿಯೇ ಆಗಿದೆ. ಸೇತುವೆ ನಿರ್ಮಾಣ ಕಾಲದಲ್ಲಿ ಇಲ್ಲಿನ ಭೂಮಾಲೀಕರು ಪರೋಪಕಾರಿ ಭಾವನೆ ತೋರಿದ ಹಿನ್ನೆಲೆಯಲ್ಲಿ ಸುಮಾರು ಐದು ದಶಕಗಳ ಹಿಂದೆಯೇ ಈ ವ್ಯಾಪ್ತಿಯಲ್ಲಿ ಮೊತ್ತಮೊದಲ ಸದೃಢ ಸೇತುವೆ ನಿರ್ಮಾಣವಾಗಲು ಸಾಧ್ಯವಾಗಿತ್ತು. ಕಾಲಕ್ರಮೇಣ ಸೇತುವೆ ಶಿಥಿಲಗೊಂಡಿದ್ದು ನೂತನ ಸೇತುವೆ ನಿರ್ಮಾಣ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದ್ದು ಕಾಮಗಾರಿ ಸಂದರ್ಭ ಸ್ಥಳೀಯರ ಸಹಕಾರ ಅತ್ಯಗತ್ಯ ಎಂದು ನುಡಿದರು.
ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಸಾಲಿನಲ್ಲಿ ಬಹಳಷ್ಟು ಕಾಮಗಾರಿಗಳನ್ನು ನಡೆಸಲಾಗಿದ್ದು ಮುಖ್ಯವಾಗಿ ಜನರಿಗೆ ಮೂಲ ಸೌಲಭ್ಯ ಒದಗಿಸುವತ್ತ ಆದ್ಯತೆ ನೀಡಲಾಗುತ್ತಿದೆ. ಅದರಂತೆ ರಸ್ತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆಯನ್ನು ಎಲ್ಲ ಭಾಗದಲ್ಲಿ ಅಳವಡಿಸುವ ಪ್ರಯತ್ನ ನಡೆದಿದೆ. ಕೆಲವು ಭಾಗದಲ್ಲಿ ತಾಂತ್ರಿಕ ತೊಂದರೆಗಳಿಂದ ಕಾಮಗಾರಿ ವಿಳಂಬವಾಗಿದ್ದರೂ ಕಾಮಗಾರಿ ಪೂರ್ಣಗೊಳಿಸಿದ ತೃಪ್ತಿ ಇದೆ ಎಂದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷೆ ಜಯಂತಿ ಎಸ್. ಉಪಾಧ್ಯಕ್ಷ ಶೇಖಬ್ಬ ನಿಡ್ಮಾಡ್, ಪಂಚಾಯಿತಿ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ, ಇಸ್ಮಾಯಿಲ್ ಮೀನಂಕೋಡಿ, ಅಬ್ದುಲ್ಲ ಕೊಡಂಚಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ವಲಯ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ಮೋರ್ಲಗುತ್ತು, ಮುಡಿಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೊಂಟುಗೋಳಿ, ಡಾ. ಉದಯಶಂಕರ್ ಭಟ್ ಸೌರ್ಕುಡೇಲು, ನರಿಂಗಾನ ಯುವಕ ಮಂಡಲದ ಅಧ್ಯಕ್ಷ ನವೀನ್ ಶೆಟ್ಟಿ ಮಂಗಲ್ಪಾಡಿ, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಎಲ್ ಸರ್ಕುಡೇಲು, ಸ್ಥಳೀಯರಾದ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು, ಮುರಳೀಧರ ಶೆಟ್ಟಿ ಮೋರ್ಲ, ಚಂದ್ರಹಾಸ್ ಪೂಜಾರಿ ಸರ್ಕುಡೇಲು, ಲಿಂಗಪ್ಪ ಪೂಜಾರಿ ಸರ್ಕುಡೇಲು ಹಾಗೂ ಪುರಂದರ ಸರ್ಕುಡೇಲು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಲ್ಲರಕೋಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

June 23, 2025

ಮರ್ಕಝ್‌ ಹಜ್‌ ಮತ್ತು ಉಮ್ರಾ ಯಾತ್ರೆ ಮುಡಿಪು ಬ್ರಾಂಚ್ ಉದ್ಘಾಟನೆ , ಭಾಗ್ಯಶಾಲಿಗೆ ಉಚಿತ ಉಮ್ರಾ ಪ್ಯಾಕೇಜ್‌ ಆಫರ್

June 13, 2025

ಹಿರಿಯ ಪತ್ರಕರ್ತ ಬಾಳೇಪುಣಿ ಇನ್ನಿಲ್ಲ

January 27, 2025
Leave A Reply

ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ತಿಂದ  ಹರೇಕಳ ನಿವಾಸಿ ಪೊಲೀಸ್‌ ಪೇದೆ ಚಿಕಿತ್ಸೆ ಫಲಕಾರಿಯಾಗದೆ ಸಾವು

By UllalaVaniJuly 28, 20250

ಹರೇಕಳ :  ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್‌…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

July 28, 2025

ಸೈಂಟ್ ಜೋಸೆಫ್ ವಿವಿ, ಬೆಂಗಳೂರು ಅಡ್ವಾನ್ಸ್ಡ್ ಕಂಪ್ಯೂಟಿ0ಗ್ ವಿಭಾಗ – ಸಿಗ್ಮಾ ಸ್ಕ್ವೇರ್ಡ್ ಮತ್ತು ಅನಾಲಿಟಿಕಾ ಸಂಸ್ಥೆಗಳ ಪದಗ್ರಹಣ ಸಮಾರಂಭ

July 28, 2025

ಮೈಕಲ್ ಡಿ ಸೊಜಾ – ಸಿಒಡಿಪಿ ಎಡ್ಯುಕೇರ್ ಬಡ್ಡಿರಹಿತ ಸಾಲರೂಪದ ವಿದ್ಯಾರ್ಥಿವೇತನ ವಿತರಣೆ

July 28, 2025
1 2 3 … 1,541 Next
Automatic YouTube Gallery

ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು

ತೊಕ್ಕೊಟ್ಟು: ಹಿರಿಯ ಬಿಜೆಪಿ
ಮುಖಂಡೆ ಅಂಗಡಿಯಿಂದ ಕಳವು
#ullalavani #news #ullala #kannadanews #mangalore #breakingnews #thokkottu
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
Now Playing
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು #ullalavani #news ...
ತೊಕ್ಕೊಟ್ಟು: ಹಿರಿಯ ಬಿಜೆಪಿ
ಮುಖಂಡೆ ಅಂಗಡಿಯಿಂದ ಕಳವು
#ullalavani #news #ullala #kannadanews #mangalore #breakingnews #thokkottu
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ
Now Playing
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ ...
ಕೊಯನಾಡು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ - ನಾಲ್ವರು ದುರ್ಮರಣ
#ullalavani #news #ullala #kannadanews #breakingnews
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications