ತೊಕ್ಕೊಟ್ಟು: ತೊಕ್ಕೊಟ್ಟುವಿನಲ್ಲಿ 3.5 ವರ್ಷದ ಮಗವಿನ ಮೇಲೆ ಲೈಂಗಿಕ ಶೋಷಣೆ ನಡೆದಿರುವುದು ಅತ್ಯಂತ ಹೀನ ಕೃತ್ಯ. ಇದರಿಂದ ಬುದ್ಧಿವಂತರ ಜಿಲ್ಲೆಗೆ ಅಪಮಾನ ಮಾಡಿದಂತಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರು ಕೃತ್ಯದ ಬಗ್ಗೆ ಮಾತನಾಡದೇ ಇರುವುದು ಅವರ ಕಾಯವೈಖರಿಯನ್ನು ತೋರಿಸುತ್ತದೆ ಎಂದು ಎಸ್ ಎಸ್ ಎಫ್ ರಾಜ್ಯ ಸದಸ್ಯ ಕೆ.ಎಂ.ಸಿದ್ದೀಖ್ ಮೋಂಟುಗೋಳಿ ಹೇಳಿದ್ದಾರೆ.


ಈ ಸಂದರ್ಭ ಎಸ್ ಎಸ್ ಎಫ್ ಜಿಲ್ಲಾ ಅಧ್ಯಕ್ಷ ಯಾಕೂಬ್ ಸಅದಿ ನಾವೂರು, ಎಸ್ ಎಸ್ ಎಫ್ ರಾಜ್ಯ ಸದಸ್ಯರಾದ ಇಸ್ಮಾಯಿಲ್ ಸಅದಿ ಕಿನ್ಯಾ, ಎಸ್ ಎಸ್ ಎಫ್ ಜಿಲ್ಲಾ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಸಅದಿ ಉರುಮನೆ, ಎಸ್ ಎಸ್ ಎಫ್ ರಾಜ್ಯ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ರಜ್ವಿ ಕಲ್ಕಟ್ಟ, ಎಸ್ ಎಸ್ ಎಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಉಮರ್ ಅಹ್ಸನಿ, ಇಸ್ಮಾಯಿಲ್ ಮಾಸ್ತರ್, ಅಲ್ತಾಫ್ ಕುಂಪಲ, ರಫೀಕ್ ಕೆ.ಸಿ.ಎಫ್, ಮುನೀರ್ ಸಖಾಫಿ, ಫಾರೂಕ್ ಸಖಾಫಿ, ಜಮಾಲುದ್ದೀನ್ ಸಖಾಫಿ, ಸವiದ್ ಅಹ್ಸನಿ, ಜಾಫರ್ ಯು. ಮೊದಲಾದವರು ಉಪಸ್ಥಿತರಿದ್ದರು.

