Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

28 ಹೊಸ ಸರ್ಕಾರಿ ಬಸ್ ರೂಟ್ ಪರ್ಮಿಟ್ : ಆರ್‌ಟಿಎ ಸಭೆಯಲ್ಲಿ ಪರ-ವಿರೋಧ ವಾದ

UllalaVaniBy UllalaVaniAugust 19, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು : ನಗರದ ವಿವಿಧ ಭಾಗಗಳಿಗೆ 28 ಹೊಸ ರೂಟ್‌ಗಳಲ್ಲಿ ಸರಕಾರಿ ಬಸ್‌ಗಳ ಸಂಚಾರಕ್ಕೆ ಪರವಾನಿಗೆ (ಪರ್ಮಿಟ್) ನೀಡುವ ಕುರಿತಂತೆ ಪರ – ವಿರೋಧ ವಾದಗಳಿಗೆ ಸೋಮವಾರ ನಡೆದ ಆರ್‌ಟಿಎ ಸಭೆ ಸಾಕ್ಷಿಯಾಯಿತು.

ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ಪಡೀಲ್‌ನ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೆಎಸ್‌ಆರ್‌ಟಿಸಿಯಿಂದ ಸಲ್ಲಿಕೆಯಾಗಿರುವ ನೂತನ ರೂಟ್‌ಗಳಲ್ಲಿ ಬಸ್‌ಗಳ ಅಗತ್ಯವಿದೆಯೇ ಎಂಬ ಬಗ್ಗೆ ಜಂಟಿ ಸಮೀಕ್ಷೆಯ ನಡೆಸಿದ ಬಳಿಕವೇ ಪರವಾನಿಗೆ ನಿರ್ಧಾರ ಕೈಗೊಳ್ಳಬೇಕು ಎಂದು ಖಾಸಗಿ ಬಸ್ಸು ಮಾಲಕರ ಪರ ವಕೀಲರಾದ ಎಂ.ವಿ. ನಾಗೇಶ್, ಪರಸರ ಕುಮಾರ್ ವಾದಿಸಿದರು.


ಕೆಎಸ್‌ಆರ್‌ಟಿಸಿ ಪರವಾಗಿ ವಾದಿಸಿದ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗಾಧಿಕಾರಿ ರಾಜೇಶ್ ಶೆಟ್ಟಿ, ಸಾರ್ವಜನಿಕರಿಂದ ಹಲವು ರೂಟ್‌ಗಳಿಗೆ ಬಸ್‌ಗಳ ಬೇಡಿಕೆ ಬಂದಲ್ಲಿಗೆ ಪರವಾನಿಗೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಖಾಸಗಿ ಬಸ್ಸುಗಳು ಇರುವಲ್ಲಿಯೂ ಸಮಯವನ್ನು ಹೊಂದಾಣಿಕೆ ಮಾಡಿಕೊಂಡು ಕೆಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಕೇಂದ್ರ ಸರಕಾರದಿಂದ ನಗರಕ್ಕೆ ನಗರಕ್ಕೆ 100 ಇಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಲಾಗಿದೆ. ರಾಜ್ಯ ಸರಕಾರದ ಶಕ್ತಿ ಯೋಜನೆಯ ಅನುಕೂಲ ನಗರದ ಮಹಿಳೆಯರಿಗೂ ಸಿಗಬೇಕೆಂಬ ಬೇಡಿಕೆ ಇದೆ. ಅದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ದ.ಕ.ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಬ್ದುಲ್ ಅಝೀಝ್ ಪರ್ತಿಪಾಡಿ ಮಾತನಾಡಿ, ಸಾವಿರಾರು ಕೋಟಿ ರೂ. ತೆರಿಗೆ ಪಾವತಿಸುತ್ತಿರುವ ದ.ಕ. ಜಿಲ್ಲೆಯ ಖಾಸಗಿ ಬಸ್ಸು ಮಾಲಕರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. 110ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಖಾಸಗಿ ಬಸ್ಸು ಮಾಲಕರಲ್ಲಿ ಕೆಲವೇ ಕೆಲವು ಮಂದಿ ಉಳಿದುಕೊಂಡಿದ್ದಾರೆ. ಇದೀಗ ನಗರ ವ್ಯಾಪ್ತಿಯಲ್ಲಿ ರೈಲ್ವೇ ಬೋಗಿಯಂತೆ ಬಸ್ಸುಗಳು ಸಂಚರಿಸುತ್ತಿರುವಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಹಾಕಿದರೆ ಖಾಸಗಿ ಬಸ್ಸುಗಳ ಮಾಲಕರು ಬೀದಿ ಪಾಲಾಗುವ ಪರಿಸ್ಥಿತಿ ಉಂಟಾಗಲಿದೆ. ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಬಸ್ಸು ಸಂಚಾರವಿಲ್ಲದಲ್ಲಿ ಈ ಸರಕಾರಿ ಬಸ್ಸುಗಳನ್ನು ಓಡಿಸುವ ವ್ಯವಸ್ಥೆಯಾಗಲಿ. ನಗರ ವ್ಯಾಪ್ತಿಯಲ್ಲಿ ಅನಾರೋಗ್ಯಕರ ಸ್ಪರ್ಧೆಗೆ ಅವಕಾಶ ಬೇಡ ಎಂದು ಆಗ್ರಹಿಸಿದರು.

ಸಾರ್ವಜನಿಕರ ಬೇಡಿಕೆಯನ್ನು ಅನುಸರಿಸಿಯೇ ಕೆಎಸ್‌ಆರ್‌ಟಿಸಿಯಿಂದ ನಗರ ವ್ಯಾಪ್ತಿಯಲ್ಲಿ ಅಗತ್ಯವಿರುವಲ್ಲಿ ಪರವಾನಿಗೆ ಕೋರಲಾಗಿದೆ. ಸಮಯವನ್ನು ಹೊಂದಾಣಿಕೆ ಮಾಡಿಕೊಂಡು ಅರ್ಜಿ ಸಲ್ಲಿರುವ ರೂಟ್‌ಗಳಲ್ಲಿ ಸಂಚಾ ರಕ್ಕೆ ಅವಕಾಶ ಕಲ್ಪಿಸುವಂತೆ ರಾಜೇಶ್ ಶೆಟ್ಟಿ ವಾದಿಸಿದರು.

ಜಿಲ್ಲಾಧಿಕಾರಿ ಕಚೇರಿ ಪಡೀಲ್‌ಗೆ ಸ್ಥಳಾಂತರಗೊಂಡಿರುವ ಕಾರಣ ಕೃಷ್ಟಾಪುರ, ಕುಂಜತ್ತಬೈಲ್, ಮಂಗಳಾದೇವಿ, ಸುಲ್ತಾನ್ ಬತ್ತೇರಿ ಒದಲಾದ ಕಡೆಗಳಿಗೆ ನೇರ ಬಸ್ಸುಗಳ ಸೌಲಭ್ಯ ಒದಗಿಸಬೇಕು. ಇದರಿಂದ ಸ್ಟೇಟ್‌ಬ್ಯಾಂಕ್ ಸುತ್ತಮುತ್ತ ವಾಹನ ದಟ್ಟಣೆ ಕಡಿಮೆಯಾಗಲಿದ್ದು, ಡಿಎಂ ನೋಟಿಫಿಕೇಶನ್ ಕೂಡಾ ರದ್ದುಪಡಿಸಬಹುದು ಎಂದು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹನುಮಂತ ಕಾಮತ್ ಸಭೆಯಲ್ಲಿ ಆಗ್ರಹಿಸಿದರು.

ನಗರದ ನಂತೂರ್, ಪಂಪ್‌ವೆಲ್ ಮೊದಲಾದ ಕಡೆಗಳಲ್ಲಿ ವಾಹನ ದಟ್ಟಣೆಯಿಂದ ಸಾರ್ವಜನಿಕ ವಾಹನ ಸಂಚಾ ರಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ನಗರದ ನಗರದಲ್ಲಿ ಟ್ಯಾಂಕರ್‌ಗಳ ಸಂಚಾರಕ್ಕೆ ನಿಷೇಧ ಹೇರಬೇಕು ಎಂದು ಸಾರ್ವಜನಿಕರ ಪರವಾಗಿ ಜಿ.ಕೆ. ಭಟ್ ಆಗ್ರಹಿಸಿದಾಗ, ಈ ಬಗ್ಗೆ ಪರಿಶೀಲಿಸುವುದಾಗಿ ಎಸ್ಪಿ ಡಾ. ಅರುಣ್ ಕುಮಾರ್ ಹೇಳಿದರು.

ಸಭೆಯಲ್ಲಿ ಡಿಸಿಪಿ ರವಿಶಂಕರ್, ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಉಪಸ್ಥಿತರಿದ್ದರು.





Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮೀನುಗಾರರ ಬಲೆ, ಪರಿಕರಗಳು ಮುಳುಗಡೆ

March 23, 2026

ಮೂರು ದಿನಗಳ ದ.ಕ ಜಿಲ್ಲಾ ಭೇಟಿಯಲ್ಲಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಧರ್ಮಸ್ಥಳದ ಸೌಜನ್ಯಾ , ಮಂಜನಾಡಿಯ ಅಶ್ವಿನಿ ಪ್ರಕರಣ ಕಾಣದಾಯಿತೇ ?

March 7, 2026

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc.ಯಲ್ಲಿ ಪ್ರಥಮ ರ‍್ಯಾಂಕ್

March 4, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಂಜೇಶ್ವರ ಮಂಡಲದ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್‌ರವರಿಗೆ ಇಡುಗಂಟು ಹಸ್ತಾಂತರಿಸಿದ ಅರ್ಜುನ್ ತಾಯಿ ಶೀಲಾ

By UllalaVaniMarch 24, 20260

ಕಾಸರಗೋಡು, ಮಾ.24: ಶಿರೂರು ಭೂಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಅವರ ತಾಯಿ ಶೀಲಾ ಅವರು ಮಂಜೇಶ್ವರ ಮಂಡಲದ ಯುಡಿಎಫ್ ಅಭ್ಯರ್ಥಿ ಎಕೆಎಂ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

March 23, 2026

ಮೀನುಗಾರರ ಬಲೆ, ಪರಿಕರಗಳು ಮುಳುಗಡೆ

March 23, 2026

ಮಂಗಳೂರು CCB ಪೊಲೀಸರ ಕಾರ್ಯಾಚರಣೆ — ತೊಕ್ಕೊಟ್ಟು ಮೂಲದ ಇಬ್ಬರು ಸೇರಿದಂತೆ 3 ಮಂದಿ ಅರೆಸ್ಟ್

March 23, 2026
1 2 3 … 1,844 Next
Automatic YouTube Gallery

ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಶ್ರೀ ಆದಿ ಬ್ರಹ್ಮ ಮೋಗೆರ ಕಳ ನಾರ್ಯದಲ್ಲಿ ಮೇ.8ರಂದು ಬ್ರಹ್ಮಕಲಶೋತ್ಸವ ; ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ
Now Playing
ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ
ಶ್ರೀ ಆದಿ ಬ್ರಹ್ಮ ಮೋಗೆರ ಕಳ ನಾರ್ಯದಲ್ಲಿ ಮೇ.8ರಂದು ಬ್ರಹ್ಮಕಲಶೋತ್ಸವ ; ...
ಶ್ರೀ ಆದಿ ಬ್ರಹ್ಮ ಮೋಗೆರ ಕಳ ನಾರ್ಯದಲ್ಲಿ ಮೇ.8ರಂದು ಬ್ರಹ್ಮಕಲಶೋತ್ಸವ ; ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
Now Playing
ವಿಧಾನಸೌಧದ ಮುಖ್ಯ ದ್ವಾರ, ಸೋಲಾರ್ ವ್ಯವಸ್ಥೆ ಸೇರಿ ಹಲವು ಕಾಮಗಾರಿಗಳಿಗೆ ಮಾ.25ರಂದು ಉದ್ಘಾಟನೆ: ಯು.ಟಿ.ಖಾದರ್
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ...
ಮಾ.25ರಂದು ವಿಧಾನಸೌಧದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ;ಸಿಎಂ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿರುವ ಕಾಮಗಾರಿಗಳು

ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Ullalavani #UtKhader #CM #Siddaramaiah #Vidhanasabha #Mangalore
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d