Site icon Ullalavani

ಸಾಮರಸ್ಯದಿಂದ ಸಮಾಜ ಉದ್ಧಾರ: ಡಾ. ಇಸ್ಮಾಯಿಲ್

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಸಾಮರಸ್ಯದಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ ಎಂದು ಬದ್ರಿಯ ಕಾಲೇಜಿನ ಪ್ರಾಚಾರ್ಯರಾಗಿರುವ ಡಾ| ಇಸ್ಮಾಯಿಲ್ ಎಸ್. ಅಬಿಪ್ರಾಯಪಟ್ಟರು.

ಅವರು ಕಿನ್ಯಾದಲ್ಲಿ ಸಾಮರಸ್ಯದ ಸಾಹಿತಿ ಗುಣವತಿ ಕಿನ್ಯಾ ಅವರು ಹಮ್ಮಿಕೊಂಡಿದ್ದ `ಸಾಮರಸ್ಯ ಸಾಹಿತ್ಯೋತ್ಸವ’ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚುಟುಕು ಸಾಹಿತಿ ಗಣೇಶ್ ಪ್ರಸಾದ್ ವಹಿಸಿದ್ದರು. ಒಲವಿನ ಚರ್ಚ್‍ನ ಧರ್ಮಗುರು ರೆ| ಫಾ| ಲಾರೆನ್ಸ್ ಡಿ’ಸೋಜಾ ಶುಭಹಾರೈಸಿದರು. ಹಿರಿಯ ಸಾಹಿತಿ ಚಂದ್ರಕಲಾ ನಂದಾವರ, ಪ್ರಸಾದ್ ನೇತ್ರಾಲಯದ ಅಬ್ದುಲ್ ಖಾದರ್ ನೇತ್ರದಾನದ ಬಗ್ಗೆ ಮಾಹಿತಿ ನೀಡಿದರು.

ಕವಿ ಸಾಹಿತಿಗಳಾದ ಅಶೋಕ್ ಕುಮಾರ್ , ಜನಶಿಕ್ಷಣ ಟ್ರಸ್ಟ್‍ನ ಶೀನ ಶೆಟ್ಟಿ, ಕೃಷ್ಣಮೂಲ್ಯ, ಕಾರ್ಯಕ್ರಮದ ಸಂಘಟಕಿ ಸಾಹಿತಿ ಗುಣವತಿ ಉಪಸ್ಥಿತರಿದ್ದರು.
ಸುಧಾ ನಾಗೇಶ್ ವಂದಿಸಿದರು. ನಳಿನಾಕ್ಷಿ ಬಿಜೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಕುಂತಲಾ ನಾಡಗೀತೆ ಪ್ರಸ್ತುತ ಪಡಿಸಿದರು. ಶ್ರೀಕಾಂತ್ ಕೊಂಡಾಣ ತಂಡದಿಂದ ನೃತ್ಯ ಕಾರ್ಯಕ್ರಮ ನಡೆಯಿತು.

Exit mobile version