ಉಳ್ಳಾಲ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಇತ್ತೀಚೆಗೆ ಪಿಲಿಕುಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾದ ವಸ್ತು ಪ್ರದರ್ಶನದಲ್ಲಿ ಕೆ.ಎಸ್. ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯದ ಮಳಿಗೆ ವಿಜ್ಞಾನಾಸಕ್ತರ ಹಾಗೂ ಶಾಲಾ ಮಕ್ಕಳ ಗಮನ ಸೆಳೆಯಿತು.
ಅಭಯಚಂದ್ರ ಜೈನ್, ಮಾಜಿ ಮೀನುಗಾರಿಕಾ ಹಾಗೂ ಯುವಜನ ಕ್ರೀಡಾಸಚಿವರು, ಎಂ.ಎಲ್.ಎ., ಈ ಮಳಿಗೆಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದು, ಮೆಚ್ಚುಗೆ ವ್ಯಕ್ತಪಡಿಸಿದರು.