ಉಳ್ಳಾಲ ನ್ಯೂಸ್ ನೆಟ್ವರ್ಕ್
ಅಂಬಿಕಾರೋಡ್: ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನ ಆಡಳಿತ ಮೊಕ್ತೇಸರರಾಗಿ ಆಯ್ಕೆಯಾದ ಗಟ್ಟಿ ಸಮಾಜದ ಅಧ್ಯಕ್ಷರಾದ ವಿಶ್ವನಾಥ ಗಟ್ಟಿ ವಗ್ಗ ಅವರನ್ನು ಗಟ್ಟಿ ಸಮಾಜದ ವತಿಯಿಂದ ಅಂಬಿಕಾರೋಡ್ನ ಗಟ್ಟಿ ಸಮಾಜ ಭವನದಲ್ಲಿ ಅಭಿನಂದಿಸಲಾಯಿತು.
ಗಟ್ಟಿ ಸಮಾಜದ ಹಿರಿಯರಾದ ಹರಿಶ್ಚಂದ್ರ ಗಟ್ಟಿ ನಾಯ್ಗರು, ನಾರಾಯಣ ಗಟ್ಟಿ ಮೇಲ್ಡರು, ನಾಯ್ಗರ ಪ್ರತಿನಿಧಿ ಪದ್ಮನಾಭ ಗಟ್ಟಿ ಕಟ್ಟಪುಣಿ, ಸೋಮನಾಥ ಸೇವಾ ಸಮಿತಿ ಅಧ್ಯಕ್ಷರಾದ ಕೆ.ಆರ್. ಗಟ್ಟಿ ಕೊರಂತೋಡಿ, ಯುವಜನ ವಿಭಾಗದ ಅಧ್ಯಕ್ಷರಾದ ಪದ್ಮನಾಭ ಗಟ್ಟಿ ಬಜಿಲಕೇರಿ, ಸೇಸಪ್ಪ ಗಟ್ಟಿ ಕೊಲ್ಯ, ಗುರಿಕಾರರಾದ ನೇಮು ಗಟ್ಟಿ ಕೊರಂತೋಡಿ, ಕೆ.ಕೆ. ಗಟ್ಟಿ, ನಾರಾಯಣ ಗಟ್ಟಿ ಪಾಂಡೇಶ್ವರ, ಸೀತಾರಾಮ ಗಟ್ಟಿ ಕಣಂತೂರು, ಕೊಂಡಾಣ ದೈವಸ್ಥಾನದ ಮೊಕ್ತೇಸರರಾದ ಕೃಷ್ಣಪ್ಪ ಗಟ್ಟಿ ಕೋಟೆಕಾರು, ಒಂಭತ್ತು ಮಾಗಣೆ ಸೀಮೆ ಗುರಿಕಾರರು ಉಪಸ್ಥಿತರಿದ್ದರು.