Site icon Ullalavani

ತೊಕ್ಕೊಟ್ಟು:ರೇಷನ್ ವಿತರಣೆ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು:ದುಡಿಮೆಯ ಆದಾಯದಿಂದ ಮನೆಗೆ ಬೇಕಾಗುವ ರೇಷನ್ ಸಾಮಾಗ್ರಿಗಳನ್ನು ಕೊಂಡೊಯ್ಯಲು ಸಾಧ್ಯವಾಗದೇ ಕುಟುಂಬಗಳಿಗೆ ಒಂದು ತಿಂಗಳಿಗೆ ಬೇಕಾಗುವಷ್ಟು ರೇಷನ್ ಸಾಮಾಗ್ರಿಗಳನ್ನು ಎಸ್ಎಸ್ಎಫ್ ತೊಕ್ಕೋಟ್ಟು ಸೆಕ್ಟರ್ ರೀಲಿಫ್ ಸವಿರ್ಸ್ ಬಹುತೇಕ ವಿತರಿಸುತ್ತಿದ್ದು ಈ ಕಾರ್ಯ ದೇಶಕ್ಕೆ ಮಾದರಿಯಾಗಿದೆ. ಎಂದು ಎಸ್ಎಸ್ಎಫ್ ಇಹ್ಶಾನ್ ಕರ್ನಾಟಕ ಕನ್ವೀನರ್ ಅಬ್ದುಲ್ ರಹಮಾನ್ ರಝ್ವಿ ಕಲ್ಕಟ್ಟ ಹೇಳಿದರು.

ಅವರು ಭಾನುವಾರ ದೇರಳಕಟ್ಟೆಯಲ್ಲಿ ನಡೆದ ಎಸ್ಎಸ್ಎಫ್ ತೊಕ್ಕೋಟ್ಟು ಸೆಕ್ಟರ್ ರಿಲೀಫ್ ಸವಿರ್ಸ್ ವತಿಯಿಂದ ರೇಷನ್ ವಿತರಿಸಿ ಮಾತನಾಡಿದರು.

ಎಸ್ಎಸ್ಎಫ್ ರಿಲೀಫ್ ಸವಿರ್ಸ್ ಚೆಯರಮನ್ ಅಲ್ತಾಪ್ ಕುಂಪಲ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭ , ಎಸ್ಎಸ್ಎಫ್ ತೊಕ್ಕೋಟ್ಟು ಸೆಕ್ಟರ್ ಕೋಶಾಧಿಕಾರಿ ಜುನೈದ್ ಮಧನಿ ನಗರ ಎಸ್ಎಸ್ಎಫ್ ತೊಕ್ಕೋಟ್ಟು ಸೆಕ್ಟರ್ ಉಪಾಧ್ಯಕ್ಷರಾದ ಇಮ್ರಾನ್ ಸ್ವಲಾತ್ ನಗರ , ಎಸ್ಎಸ್ಎಫ್ ಕೊಣಾಜೆ ಸೆಕ್ಟರ್ ನಾಯಕ ಅಬ್ದುಲ್ ಮಜೀದ್ ಉಪಸ್ಥಿತರಿದರು

Exit mobile version