Site icon Ullalavani

ಮಂಜನಾಡಿ ವಿದ್ಯಾರ್ಥಿನಿಗೆ ಪ್ರಶಸ್ತಿ ಮೊತ್ತ ನೀಡಿದ ` ಕನ್ನಡಪ್ರಭ’ ಪತ್ರಿಕೆಯ ವಾಗ್ಲೆ

ಉಳ್ಳಾಲ ನ್ಯೂಸ್ ನೆಟ್ ವರ್ಕ್
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2016ನೆ ಸಾಲಿನ ಪ. ಗೋ. ಪ್ರಶಸ್ತಿ ಪ್ರದಾನ ಸಮಾರಂಭ ಇಂದು ಪೂರ್ವಾಹ್ನ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಗ್ರಾಮೀಣ ವರದಿಗಾರಿಕೆಗಾಗಿ `ಕನ್ನಡ ಪ್ರಭ’ ಪತ್ರಿಕೆಯ ವರದಿಗಾರ ಸಂದೀಪ್ ವಾಗ್ಲೆಯವರಿಗೆ ಪ್ರಶಸ್ತಿಯನ್ನು ಅತಿಥಿಗಳು ಇಂದು ಪ್ರದಾನ ಮಾಡಿದರು.

ಇದೇ ವೇಳೆ ವಾಗ್ಲೆಯವರು ತನಗೆ ದೊರೆತ ಪ್ರಶಸ್ತಿಯ ಮೊತ್ತವನ್ನು ಮಂಜನಾಡಿ ಸಮೀಪದ ಮೊಂಟೆಪದವಿನ ಬಡ ಕೊರಗ ಕುಟುಂಬದ ರೂಪಾ ಎಂಬ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕಾಗಿ ನೀಡಿ ಮಾದರಿಯಾದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಹರಿಕೃಷ್ಣ ಬಂಟ್ವಾಳ್, ದ.ಕ. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.

Exit mobile version