Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಉಳ್ಳಾಲ: ಎಸ್‍ಡಿಪಿಐ ಬೃಹತ್ ಸಾರ್ವಜನಿಕ ಸಮಾವೇಶ

UllalaVaniBy UllalaVaniApril 24, 2017Updated:April 25, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ; ದೇಶದಲ್ಲಿ ಕರಾಳ ಕಾನೂನು ಮುಸ್ಲಿಮರು, ದಲಿತರು ಹಾಗೂ ಆದಿವಾಸಿಗಳನ್ನು ಭಯಗ್ರಸ್ಥ ವಾತಾವರಣದಲ್ಲಿ ಬದುಕುವಂತೆ ಮಾಡಿದ್ದು ಇದರಿಂದ ಸಮಾಜದಲ್ಲಿ ಭೀತಿ ರಾಜಕೀಯ ತಾಂಡವವಾಡುತ್ತಿದೆ. ಅಂತಹ ವಾತಾವರಣ ಮಟ್ಟಹಾಕಲು ಶಾಂತಿಪ್ರಿಯ ಪ್ರಜೆಗಳು ಒಂದಾಗಬೇಕಿದೆ. ಆ ನಿಟ್ಟಿನಲ್ಲಿ ಎಸ್ಡಿಪಿಐ ನಡೆಸುತ್ತಿರುವ ಭೀತಿ ರಾಜಕೀಯದ ವಿರುದ್ಧ ಐಕ್ಯಗೊಳ್ಳೋಣ ರಾಷ್ಟ್ರವ್ಯಾಪಿ ಅಭಿಯಾನ ಯಶಸ್ವಿಯಾಗಿ ಸಾಗುತ್ತಿದ್ದು ಎ. 29ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಮಾಪನಗೊಳ್ಳಲಿದೆ ಎಂದು ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎ. ಸಯೀದ್ ಹೇಳಿದರು.

sdpi 01

sdpi 02

sdpi 03

sdpi 04

sdpi 05

sdpi 06

sdpi 08

sdpi 09

sdpi 10

sdpi 11

sdpi 14

sdpi 15

sdpi 17

sdpi 18

sdpi 19

sdpi 20

sdpi 21

sdpi 23

sdpi 24

sdpi 25

sdpi 26

ಎಸ್ಡಿಪಿಐ ವತಿಯಿಂದ ಉಳ್ಳಾಲ ಹಝ್ರತ್ ಶಾಲಾ ಮೈದಾನದ ವೀರರಾಣಿ ಅಬ್ಬಕ್ಕ ವೇದಿಕೆಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶಾದ್ಯಂತ ವಿಶೇಷವಾಗಿ ಅಲ್ಪಸಂಖ್ಯಾತರ, ದಲಿತರ, ಆದಿವಾಸಿಗಳ ಮನದಲ್ಲಿ ಭೀತಿ ಹಾಗೂ ಅಭದ್ರತೆ ಹೆಚ್ಚಿದೆ. ಹತ್ಯೆ, ಪ್ರತೀಕಾರ, ಕೊಲೆ, ಧ್ವಂಸ, ಸಾಮರಸ್ಯ ಕದಡುವಂತಹ ಕಾರ್ಯಗಳು ಕಾನೂನಿನ ಯಾವುದೇ ಭಯವಿಲ್ಲದೆ ಎಗ್ಗಿಲ್ಲದೆ ಸಾಗುತ್ತಿದೆ. ಅಷ್ಟಕ್ಕೂ ದುಷ್ಕರ್ಮಿಗಳ ಅಟ್ಟಹಾಸ ತಾರಕಕ್ಕೆ ಏರಿದ್ದರೂ ಕೇಂದ್ರ ಸರಕಾರ ಮೌನ ವಹಿಸಿರುವುದು ದುಷ್ಕರ್ಮಿಗಳಿಗೆ ಹೆಚ್ಚಿನ ಬಲ ತಂದಿದೆ ಎಂದರು.

ಬಿಜೆಪಿ ಸರಕಾರದ ಭ್ರಷ್ಟ ಹಾಗೂ ತಾರತಮ್ಯ ನೀತಿ ಮತ್ತು ಆಡಳಿತದ ಬಗ್ಗೆ ಪ್ರಶ್ನಿಸಿದರೆ ರಾಷ್ಟ ್ರನಿಂದನೆ ಕೇಸು ದಾಖಲಿಸಿ ಜೈಲಿಗೆ ಅಟ್ಟುವ ಕೆಲಸ ಮಾಡುತ್ತಿದ್ದಾರೆ. ತಮ್ಮ ಹಕ್ಕುಗಳಿಗೆ ಹೋರಾಟ ಮಾಡುವವರನ್ನು ದೇಶದ್ರೋಹಿಗಳು ಹಾಗೂ ದೇಶ ವಿರೋಧಿಗಳು ಎಂದು ಬಿಂಬಿಸಿ ಸಮಾಜದಿಂದ ದೂರವಿಡುವ ಕೆಲಸ ಮಾಡುತ್ತಿದೆ. ಮೋದಿ ಸಂಘ ಪ್ರಾಯೋಜಿತ ಮಾಧ್ಯಮ ಗುಂಪುಗಳು ಕೆಲವರಿಗೆ ಕಲ್ಪಿತ ಸುದ್ದಿಗಳಿಗೆ ಹೆಚ್ಚಿನ ರಂಜನೆ ಕೊಡುತ್ತಿದ್ದು ಜನರ ದಿಕ್ಕು ತಪ್ಪಿಸುತ್ತಿದೆ ಎಂದ ಅವರು ಕೋಮುವಾದಿ ಪಡೆ ಪ್ರಗತಿಪರ ಚಿಂತಕರನ್ನು ಮಾನವ ಹಕ್ಕು ಹೋರಾಟಗಾರರನ್ನು ಬಿಡದೆ ಹಿಂಸಿಸುತ್ತಿದೆ. ಪ್ರಗತಿಪರ ಚಿಂತಕರಾದ ಗೋವಿಂದ ಪನ್ಸಾರೆ, ದಾಮೋದರ ಧಾಬೋಲ್ಕರ್, ಎಂ.ಎಂ. ಕಲ್ಬುರ್ಗಿ ಅವರನ್ನು ಕ್ರೂರವಾಗಿ ಯವ್ಯವಸ್ಥಿತ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಪೋಲಿಸ್ ದೌರ್ಜನ್ಯ ವ್ಯಾಪಕವಾಗಿ ನಡೆಯುತ್ತಿದೆ. ದೇಶವನ್ನೇ ಅಭದ್ರತೆಗೆ ತಂದಿತ್ತಿರುವ ಅದೆಷ್ಟೋ ಪ್ರಕರಣಗಳು ಇದ್ದರೂ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಬೇಕಿದ್ದ ಜಾತ್ಯತೀತ ಪಕ್ಷಗಳು ಮೌನವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ನುಡಿದರು.

ಆಹಾರ ಸಾಮಗ್ರಿಗಳ ಬೆಲೆ ಗಗನಕ್ಕೇರಿದ್ದು ಬಹುರಾಷ್ಟ್ರೀಯ ಸಂಸ್ಥೆಗಳನ್ನು ಘೋಷಿಸಲಾಗುತ್ತಿದ್ದು ರೈತರನ್ನು ಕಡೆಗಣಿಸಲಾಗುತ್ತಿದೆ. ರೈತರು ಸಾಲ ಮನ್ನಾ ಮಾಡಲು ಅದೆಷ್ಟೋ ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ಸರಕಾರ ನಿರ್ಲಕ್ಷ್ಯ ವಹಿಸಿದೆ. ಬೆಳೆ ತೀರಿಸಲಾಗದೆ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೈಯುತ್ತಾ ಕುಟುಂಬವನ್ನು ಬೀದಿಗೆ ಬೀಳುತ್ತಿದೆ. ಹಾಗಿದ್ದರೂ ಬಡವರ ಬಗ್ಗೆ ಎಳ್ಲಷ್ಟೂ ಕಾಳಜಿ ಇಲ್ಲದಿರುವ ಸರಕಾರ ಬಹುರಾಷ್ಟ್ರೀಯ ಸಂಸ್ಥೆಗಳ ಸಾಲ ಮನ್ನಾ ಮಾಡಲು ಉತ್ಸುಕವಾಗಿದೆ ಎಂದು ಆರೋಪಿಸಿದರು.

ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್, ರಾಜ್ಯ ಕಾರ್ಯದರ್ಶಿ ಇಲ್ಯಾಸ್ ಪರಂಗಿಪೇಟೆ, ಅಲ್ಪೋನ್ಸ್ ಫ್ರಾಂಕೋ, ಅಕ್ರಮ ಹಸನ್ ಮಾತನಾಡಿದರು.

ಎಸ್ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯ ಕೂಸಪ್ಪ, ಮಜೀದ್ ಖಾನ್, ಸಿದ್ದಿಕ್ ಪುತ್ತೂರು, ಅಬ್ಬಾಸ್ ಕಿನ್ಯ, ನಾಸಿರ್ ಸಜಿಪ, ಅಯಾಝ್ ಕೃಷ್ಣಾಪುರ, ಇಕ್ಬಾಲ್ ಐ.ಎಂ.ಆರ್, ಹಾರಿಸ್ ಮಲಾರ್, ನವಾಝ್ ಉಳ್ಳಾಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಅತ್ತಾವುಲ್ಲಾ ಜೋಕಟ್ಟೆ ಸ್ವಾಗತಿಸಿದರು. ಅಶ್ರಪ್ ಮಂಚಿ ವಂದಿಸಿದರು. ಇಕ್ಬಾಲ್ ಬೆಳ್ಳಾರೆ ಹಾಗೂ ಝಾಹಿದ್ ಮಲಾರ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮಕ್ಕೆ ಮುನ್ನ ತೊಕ್ಕೊಟ್ಟಿನಿಂದ ಉಳ್ಳಾಲ ಪೇಟೆಯ ತನಕ ಕಾಲ್ನಡಿಗೆ ಭವ್ಯ ಮೆರವಣಿಗೆ ಜಾಥಾ ನಡೆಯಿತು.






 

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಲ್ ಇಹ್ಸಾನ್ ಕಚೇರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ

August 15, 2026

ತೊಕ್ಕೊಟ್ಟಿನಲ್ಲಿ ಬಿಜೆಪಿ ಮಂಗಳೂರು ಮಂಡಲದಿಂದ 80ನೇ ಸ್ವಾತಂತ್ರ್ಯೋತ್ಸವ

August 15, 2026

ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
All News

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬೆಲೆಯನ್ನುಅರಿತುಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ : ಕೆ.ಟಿ.ಸುವರ್ಣ

By UllalaVaniAugust 15, 20260

ತೊಕ್ಕೊಟ್ಟು: ವಿದೇಶಿ ಬ್ರಿಟಿಷರ ಗುಲಾಮಗಿರಿಯಿಂದ ಭಾರತವನ್ನು ಮುಕ್ತಗೊಳಿಸಲು ಅಸಂಖ್ಯಾತ ದೇಶಪ್ರೇಮಿಗಳು ತಮ್ಮ ಪ್ರಾಣವನ್ನೇ ದೇಶಕ್ಕಾಗಿ ಅರ್ಪಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ,…

ಕಲ್ಲಾಪುವಿನ ಔಟ್‌ಡೋರ್ ಗ್ರ್ಯಾಂಡ್‌ಬೇಯಲ್ಲಿ ಡಕ್ಷ್ ಪ್ಲೇ ಸ್ಕೂಲ್ ಅದ್ದೂರಿ ಸ್ವಾತಂತ್ರ್ಯ ದಿನ ಆಚರಣೆ

August 15, 2026

ಅಲ್ ಇಹ್ಸಾನ್ ಕಚೇರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ

August 15, 2026

ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ಪೋಷಕರ ದಿನಾಚರಣೆ: ವಂಶವೃಕ್ಷ ಸ್ಪರ್ಧೆ

August 15, 2026
1 2 3 … 2,063 Next
Automatic YouTube Gallery

|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
Now Playing
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ...
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
Now Playing
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ ...
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version