ಉಳ್ಳಾಲ ನ್ಯೂಸ್ ನೆಟ್ವರ್ಕ್
ನವದೆಹಲಿ: ದೇಶಾದ್ಯಂತ ವ್ಯಾಪಕ ಪ್ರತಿಭಟನೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ನಿರ್ಭಯ ಸಾಮೂಹಿಕ ತ್ಯಾಚಾರ ಹಾಗೂ ಸಾವಿಗೆ ಕಾರಣರಾಗಿದ್ದ 4 ಜನ ಅಪರಾಧಿಗಳಿಗೆ ದೆಹಲಿ ಕೋರ್ಟು ನೀಡಿದ್ದ ಮರಣದಂಡನೆಯನ್ನು ಖಾಯಂಗೊಳಿಸುವ ಮಹತ್ತರವಾದ ತೀರ್ಪನ್ನು ಸುಪ್ರೀಂ ಕೋರ್ಟು ಶುಕ್ರವಾರ ಹೊರಡಿಸಿದೆ.
2013ರಲ್ಲಿ ದೆಹಲಿಯ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆ ನೀಡಿ ಆದೇಶ ನೀಡಿತ್ತು. ಅದರ ಮರು ವರ್ಷ ದೆಹಲಿ ಹೈಕೋರ್ಟ್ ಕಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ಆರೋಪಿಗಳಾದ ಅಕ್ಷಯ್ ಠಾಕೂರ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಮುಕೇಶ್ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಇದೀಗ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದು, ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ