ಉಳ್ಳಾಲ ನ್ಯೂಸ್ ನೆಟ್ ವರ್ಕ್
ವಿದ್ಯಾನಗರ : ಗ್ರಾಮೀಣ ಪ್ರದೇಶದ ಒಳಪ್ರದೇಶಗಳ ಸಂಪರ್ಕದಿಂದ ಅಭಿವೃದ್ಧಿಗೆ ಪೂರಕವಾಗಿದ್ದು, ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯಾನಗರ ಕಲ್ಮಿಂಜ ರಸ್ತೆ ಇಲ್ಲಿನ ಜನರೊಂದಿಗೆ ಕೃಷಿಕರಿಗೂ ಸಹಕಾರಿಯಾಗಲಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಡಾಮರೀಕರಣಕ್ಕೆ ಒತ್ತು ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ಅವರು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ವಿದ್ಯಾನಗರದಿಂದ ಅಂಬುಗ, ಮಟ್ಟೆಮಾರ್, ಕಂಬಳ, ದೋಸೆಮನೆಯಿಂದ ಕಲ್ಮಿಂಜ ಸಂಪರ್ಕಿಸುವ ನೂತನ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.
ಕುರ್ನಾಡು ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿಯವರ ಶ್ರಮದಿಂದ ಈ ರಸ್ತೆ ನಿರ್ಮಾಣವಾಗಿದೆ. ಜನಪ್ರತಿನಿಧಿಗಳು ಉತ್ತಮ ಕಾರ್ಯ ನಿರ್ವಹಿಸಿದಾಗ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಸಾಧ್ಯ ಎಂದರು.
ಕುರ್ನಾಡು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ. ಆರ್. ರವಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸದಸ್ಯ ಹೈದರ್ ಕೈರಂಗಳ, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾ ಮಿರಾಂಡ, ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಸದಸ್ಯ ಮುರಳೀಧರ ಶೆಟ್ಟಿ , ಅಬ್ದುಲ್ ರಹಿಮಾನ್, ಜಯಂತಿ, ಸೆಫಿಯಾ ಖಾಸಿಂ, ಲತೀಫ್ ಕಾಪಿಕಾಡ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್.ಎಸ್. ಕರೀಂ, ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೀಲಾವತಿ, ಪದ್ಮನಾಭ ನರಿಂಗಾನ, ಮತ್ತಿತರರು ಉಪಸ್ಥಿತರಿದ್ದರು.


















