ಉಳ್ಳಾಲ ನ್ಯೂಸ್ ನೆಟ್ವರ್ಕ್
ತೊಕ್ಕೊಟ್ಟು:ಇಲ್ಲಿನ ನಗರಸಭಾ ವತಿಯಿಂದ ಸಾರ್ವಜನಿಕರ ದೂರಿನ ಮೇರೆಗೆ ಮತ್ತು ಪೌರಾಯುಕ್ತರ ಆದೇಶದ ಮೇರೆಗೆ ತೊಕ್ಕೊಟ್ಟು ರಸ್ತೆ ಬದಿಯಲ್ಲಿದ್ದ ಗೂಡಂಗಡಿಗಳನ್ನು ಶನಿವಾರ ತೆರವುಗೊಳಿಸಲಾಯಿತು.
ಶಿಯಾಳದ ಗೆರಟೆಯಲ್ಲಿ ಮಳೆಯ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡುವ ಬಗ್ಗೆ ಆರೋಗ್ಯ ಇಲಾಖೆ ಈ ಹಿಂದೆ ಎಚ್ಚರಿಸಿದರೂ ಪ್ರಯೋಜನವಾಗಿಲ್ಲ ಈ ನಿಟ್ಟಿನಲ್ಲಿ ತೊಕ್ಕೊಟ್ಟು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ತೆರವುಗೊಳಿಸಿದ್ದೇವೆ ಎಂದು ಉಳ್ಳಾಲ ನಗರಸಭೆ ಆರೋಗ್ಯ ನಿರೀಕ್ಷಕ ರಾಜೇಶ್ ಹೇಳಿದರು.
ಕಾರ್ಯಾಚರಣೆ ವೇಳೆ ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.