ಉಳ್ಳಾಲ ನ್ಯೂಸ್ ನೆಟ್ವರ್ಕ್
ಸುಭಾಷ್ನಗರ: ವಿಶ್ವಪರಿಸರ ದಿನಾಚರಣೆ ಅಂಗವಾಗಿ ಉಳ್ಳಾಲ ಸುಭಾಷ್ನಗರದ ಕೆ. ಪಾಂಡ್ಯರಾಜ ಬಲ್ಲಾಳ್ ಕಾಲೇಜು ಕ್ಯಾಂಪಸ್ನಲ್ಲಿ ಕೆ. ಪಾಂಡ್ಯರಾಜ ಬಲ್ಲಾಳ್ ಟ್ರಸ್ಟ್ನ ಮೆನೇಜಿಂಗ್ ಟ್ರಸ್ಟಿ ಡಾ. ಪ್ರಿಯಾ ಕೆ. ಬಲ್ಲಾಳ್ ಸಸಿ ನೆಡುವ ಮೂಲಕ ಆಚರಿಸಲಾಯಿತು. ಕೆ. ಪಾಂಡ್ಯರಾಜ ಬಲ್ಲಾಳ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶರ್ಮಿಳಾ ಮುಖೇಶ್ ರಾವ್ ಹಾಗೂ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಕೈನಿ ಸಿಸಿಲಿಯಾ ಉಪಸ್ಥಿತರಿದ್ದರು.



