ಉಳ್ಳಾಲ ನ್ಯೂಸ್ ನೆಟ್ವರ್ಕ್
ಮಂಜೇಶ್ವರ: ಸುರಕ್ಷಾ ದಂತ ಚಿಕಿತ್ಸಾಲಯದ ವಿಂಶತಿಯ ಸಂಭ್ರಮವನ್ನು ಬಹಳ ವಿಶಿಷ್ಟ ರೀತಿಯಿಂದ ಆಚರಿಸಲಾಯಿತು. ಜುಲೈ 3 1997ರಲ್ಲಿ ಅಂದಿನ ಬಂಟ್ವಾಳ ಕ್ಷೇತ್ರದ ಶಾಸಕರಾಗಿದ್ದ ಬಿ. ರಮಾನಾಥ ರೈ ಇವರಿಂದ ಉದ್ಘಾಟನೆಗೊಂಡು 20 ವರ್ಷ ಸಾರ್ಥಕ ಸೇವೆ ಸಲ್ಲಿಸಿದ ನೆನಪಿನಲ್ಲಿ ಇಂದು ಸುರಕ್ಷಾ ದಂತ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಉಚಿತವಾಗಿ ಸಾಗುವಾನಿ ಮತ್ತು ನೇರಳೆ ಗಿಡಗಳನ್ನು ನೀಡಿ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಲಾಯಿತು.
ಜನರಲ್ಲಿ ಹಸಿರು ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಉಚಿತವಾಗಿ ಗಿಡಗಳನ್ನು ನೀಡಿದ್ದಾರೆ. ಎಂದ ಅವರು ಗಿಡ ಮರಗಳನ್ನು ನೆಟ್ಟು ಪರಿಸರವನ್ನು ಶುಚಿಯಾಗಿಸಿಟ್ಟುಕೊಂಡಲ್ಲಿ ಸ್ವಚ್ಛ ಗಾಳಿ ಬೆಳಕು ನೀರು ದೊರಕಿ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ಕರೆ ನೀಡಿದರು.
ಚೂಂತಾರು ಸರೊಜೀನಿ ಭಟ್ ಪ್ರತಿಷ್ಠಾನ ಮತ್ತು ಸುರಕ್ಷಾ ದಂತ ಚಿಕಿತ್ಸಾಲಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಂದಿಗೆ ಗಿಡಗಳನ್ನು ವಿತರಿಸಲಾಯಿತು.