ಉಳ್ಳಾಲ ನ್ಯೂಸ್ ನೆಟ್ ವರ್ಕ್
ಸೋಮೇಶ್ವರ: ಮಂಗಳೂರು ಕರಾವಳಿ ಸಾಂಸ್ಕøತಿಕ ಪರಿಷತ್ ಇದರ ವತಿಯಿಂದ ಕಾರ್ಗಿಲ್ ವಿಜಯ್ ದಿವಸದ ಪ್ರಯುಕ್ತ ಶತಾಯುಷಿ ಹಾಗೂ ಹಿರಿಯ ಯೋಧ ಸೋಮೇಶ್ವರ ನಿವಾಸಿ ಕ್ಯಾಪ್ಟನ್ ಬಿ.ಎಸ್.ಬಾಲಕೃಷ್ಣ ರೈ ಇವರಿಗೆ ಸನ್ಮಾನ ಕಾರ್ಯಕ್ರಮ ಸ್ವಗೃಹದಲ್ಲಿ ಬುಧವಾರ ನಡೆಯಿತು.
ಮಂಗಳೂರು ಕರಾವಳಿ ಸಾಂಸ್ಕøತಿಕ ಪರಿಷತ್ ಇದರ ಅಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡರುಗಳಾದ ಚಂದ್ರಹಾಸ್ ಉಚ್ಚಿಲ್, ರವೀಂದ್ರ ರೈ ಉಳಿದೊಟ್ಟು, ಜಯರಾಮ್ ಶೆಟ್ಟಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಧವ ಬಗಂಬಿಲ, ಸಂತೋಷ್ ಕುಮಾರ್ ರೈ ಬೊಳಿಯಾರ್, ಹಿರಿಯರಾದ ಸೀತಾರಾಮ್ ಶೆಟ್ಟಿ, ನಿವೃತ ಯೋಧ ಪ್ರವೀಣ್ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.