Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಕೊಣಾಜೆ ಠಾಣಾ ವ್ಯಾಪ್ತಿಯ ಸರ್ವ ಗಸ್ತು ಸದಸ್ಯರ ಸಭೆ

UllalaVaniBy UllalaVaniAugust 7, 2017Updated:August 7, 2017No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN Networks

ಕೊಣಾಜೆ: ವಿದೇಶಗಳಲ್ಲಿರುವಂತೆ ದೇಶದ ಪೊಲೀಸ್ ಇಲಾಖೆಗಳಲ್ಲಿಯೂ ಸುಧಾರಿತ ವ್ಯವಸ್ಥೆ ಜಾರಿಯಾಗಬೇಕಿದ್ದು, ಇದರಿಂದ ಪೊಲೀಸರು ಸಮಯ ಪಾಲನೆಯ ಜತೆಗೆ ಕರ್ತವ್ಯಗಳಲ್ಲಿಯೂ ಯಶಸ್ವಿಯಾಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಕೆ.ಬೈರಪ್ಪ ಅಭಿಪ್ರಾಯಪಟ್ಟರು.

6mdp1 6mdp2 8ullal audience

DSC_1001 DSC_1002 DSC_1003

????????????????????????????????????

DSC_1005 DSC_1010 DSC_1011ಅವರು ಕೊಣಾಜೆ ಪೊಲೀಸ್ ಠಾಣೆ ವತಿಯಿಂದ ಕೊಣಾಜೆಯ ಮಂಗಳ ಆಡಿಟೋರಿಯಂನಲ್ಲಿ ಭಾನುವಾರ ಜರಗಿದ ಸುಧಾರಿತ ಗಸ್ತು ವ್ಯವಸ್ಥೆ ( ಜನಸ್ನೇಹಿ ಪೊಲೀಸ್ – ಪ್ರದೇಶಕ್ಕೊಬ್ಬ ಪೊಲೀಸ್ ) ಕೊಣಾಜೆ ವ್ಯಾಪ್ತಿಯ ಸರ್ವ ಗಸ್ತು ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದ ಪೊಲೀಸ್ ವ್ಯವಸ್ಥೆಯಡಿ ಸರಿಯಾದ ಅನುಕೂಲತೆಗಳನ್ನು ಹಾಗೂ ತಾಂತ್ರಿಕ ಜ್ಞಾನವನ್ನು ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿಫಲವಾಗಿದೆ, ಡಿಸಿಪಿ ಮೇಲ್ಮಟ್ಟಕ್ಕೆ ಉತ್ತಮ ವ್ಯವಸ್ಥೆಯಿದ್ದರೂ, ಅವರಿಂದ ಕೆಳ ಅಧಿಕಾರಿಗಳಿಗೆ ಸೂಕ್ತ ವ್ಯವಸ್ಥೆ ದೊರೆಯುತ್ತಿಲ್ಲ. ವಿದೇಶಗಳಲ್ಲಿರುವ ಪೊಲೀಸ್ ವ್ಯವಸ್ಥೆಯನ್ನು ಹೋಲಿಸಿದರೆ ದೇಶದಲ್ಲಿನ ವ್ಯವಸ್ಥೆ ಬಹಳ ಕುಂಠಿತವಾಗಿದೆ. ಇದನ್ನು ಅಭಿವೃದ್ಧಿ ಪಡಿಸುವಲ್ಲಿ ಶ್ರಮವಹಿಸಬೇಕಿದೆ ಎಂದರು.

ಸಹಾಯಕ ಪೊಲೀಸ್ ಆಯುಕ್ತ ರಾಮ ರಾವ್ ಮಾತನಾಡಿ ` ಕೇಂದ್ರ ಸರಕಾರದ ಯೋಜನೆಯಂತೆ ಮಂಗಳೂರು ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿರುವುದರಿಂದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಿ.ಸಿ.ಟಿವಿಯನ್ನು ಅಳವಡಿಸುವ ಭರವಸೆ ಸಿಕ್ಕಿದೆ. ಈಗಾಗಲೇ ಇಲಾಖೆಯಿಂದ ಕ್ಯಾಮರಾ ಅಳವಡಿಸುವ ಪ್ರದೇಶಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದರು. ಸಾರ್ವಜನಿಕ ಹಿತಾಸಕ್ತಿಯಿಂದ ಖಾಸಗಿ ಸಂಸ್ಥೆಗಳು ಆಯಾಯ ಪ್ರದೇಶಕ್ಕೆ ಸಿಸಿಟಿವಿಯನ್ನು ಅಳವಡಿಸುವಂತೆ ಇಲಾಖೆಯ ವತಿಯಿಂದ ಮನವಿ ಮಾಡಲಾಗುವುದು. ಮಂಗಳೂರಿಗೆ ಟಿಕೆಟ್ ಪಡೆದರೂ ಪಂಪ್ ವೆಲ್ ನಲ್ಲಿ ಇಳಿಸುತ್ತಾರೆ, ಬಿ.ಸಿ.ರೋಡಿಗೆ ಟಿಕೇಟ್ ಪಡೆದರೂ ಮುಡಿಪುವಿನಲ್ಲಿ ಇಳಿಸಿ ಬೇರೆ ಬಸ್ಸುಗಳಿಗೆ ಪ್ರಯಾಣಿಕರನ್ನು ಕಳುಹಿಸುತ್ತಾರೆ ಎಂಬ ಗ್ರಾಮಸ್ಥರ ದೂರಿಗೆ ಪ್ರತಿಕ್ರಿಯಿಸಿದ ಅಧಿಕಾರಿ ಸಮಸ್ಯೆ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು. ಗಾಂಜಾ ವ್ಯಸನಿಗಳ ಕುರಿತು ರಾಜಕೀಯ ಹಸ್ತಕ್ಷೇಪವೇ ಮಾಡಿಲ್ಲ. ಅಂತಹ ಉದಾಹರಣೆಗಳಿದ್ದಲ್ಲಿ ಸಭೆಯಲ್ಲಿ ತಿಳಿಸಬಹುದು ಎಂದು ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಿದರು.

ಕೇಳಿ ಬಂದ ದೂರುಗಳು :
ರಸ್ತೆ ಬದಿಗಳಲ್ಲಿ ತ್ಯಾಜ್ಯಗಳನ್ನು ಎಸೆದು ಪರಿಸರವನ್ನು ಮಾಲಿನ್ಯಗೊಳಿಸುತ್ತಿರುವ ಪ್ರಕರಣಗಳು ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಅಲ್ಲಲ್ಲಿ ನಡೆಯುತ್ತಿದೆ. ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಹಾಕುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕಿದೆ ಎಂದು ಮಂಜನಾಡಿ ಪಂಚಾಯಿತಿ ಸದಸ್ಯ ಇಸ್ಮಾಯಿಲ್ ದೊಡ್ಡಮನೆ ಹೇಳಿದರು.

ಖಾಸಗಿ ಬಸ್ಸು ಸಿಬ್ಬಂದಿ ಹಿರಿಯರು, ಮಕ್ಕಳನ್ನು ಸೇರಿದಂತೆ ಪ್ರಯಾಣಿಕರ ಜತೆಗೆ ಅತಿರೇಕವಾಗಿ ವರ್ತಿಸುತ್ತಾರೆ. ಸಾರ್ವಜನಿಕವಾಗಿಯೇ ಚಿಲ್ಲರೆ ಇಲ್ಲದೇ ಇದ್ದಲ್ಲಿ, ಇಳಿಯಲು ತಡವಾದಲ್ಲಿ ಅಶ್ಲೀಲವಾಗಿ ನಿಂದಿಸುತ್ತಾರೆ, ಇದು ತೀರಾ ಮುಜುಗರವನ್ನುಂಟು ಮಾಡುತ್ತಿದೆ. ಈ ಕುರಿತು ಇಲಾಖೆ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಕೊಣಾಜೆ ಪಂಚಾಯಿತಿ ಸದಸ್ಯ ಅಚ್ಚುತ್ತ ಗಟ್ಟಿ ದೂರಿದರು.

ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಇನ್ಫೋಸಿಸ್, ಮೂರು ಖಾಸಗಿ ಆಸ್ಪತ್ರೆಗಳು ತಲೆ ಎತ್ತು ನಿಂತಿವೆ. ದಿನದಿಂದ ದಿನಕ್ಕೆ ಅಪರಾಧ ಚಟುವಟಿಕೆಗಳ ಪ್ರಮಾಣವೂ ಹೆಚ್ಚಾಗುತ್ತಿವೆ. ಅಪರಾಧಿಗಳು ಇಂದಿನ ತಾಂತ್ರಿಕತೆಯ ಕಾರುಗಳಲ್ಲಿ ಪಲಾಯನಗೈದರೆ, ಪೊಲೀಸರು ಅದೇ ಹಳೇಯ ಜೀಪಿನಲ್ಲಿ ಹಿಂಬಾಲಿಸಿ ಅವರನ್ನು ಹಿಡಿಯಲು ಸಾಧ್ಯವೇ?. ಅದಕ್ಕಾಗಿ ಸರಕಾರದಿಂದ ಅನುಕೂಲತೆಗಳನ್ನು ಪೂರೈಸಲು ಸಾಧ್ಯವಾಗದೇ ಇದ್ದರೂ, ಠಾಣಾ ವ್ಯಾಪ್ತಿಯಲ್ಲಿರುವ ಸಂಸ್ಥೆಗಳಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಹೆದ್ದಾರಿ ಪಕ್ಕದಲ್ಲಿ ಸಿಸಿಟಿವಿಯನ್ನು ನೀಡುವಂತೆಯೂ ಹಾಗೂ ಪೊಲೀಸರಿಗೆ ಉತ್ತಮ ವಾಹನವನ್ನು ಒದಗಿಸುವ ಕುರಿತು ಇಲಾಖೆಯಿಂದಲೇ ಮನವಿ ಮಾಡಬೇಕಿದೆ. ಇದರಿಂದ ಅಪರಾಧ ಕೃತ್ಯಗಳನ್ನು ಕಡಿಮೆಗೊಳಿಸಬಹುದು ಎಂದು ನರಿಂಗಾನದ ನಂದಕುಮಾರ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾದಕ ದ್ರವ್ಯ ಪ್ರಕರಣಗಳಲ್ಲಿ ಬಂಧಿತರಾಗುವವರನ್ನು ರಾಜಕೀಯ ಪ್ರಭಾವ ಬಳಸಿ ಬಿಡುಗಡೆಗೊಳಿಸಲಾಗುತ್ತಿದೆ. ಇದರಿಂದ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಬಾರದು ಎಂದು ಇಸ್ಮಾಯಿಲ್ ಎಂಬವರು ತಿಳಿಸಿದರು.

ನಾಟೆಕಲ್ ನಿಂದ ಕುತ್ತಾರಿನವರೆಗೆ ಬಸ್ಸುಗಳು ನಿಲ್ದಾಣಗಳಲ್ಲಿ ನಿಲ್ಲದೆ ರಸ್ತೆಯಲ್ಲೇ ನಿಲ್ಲುವುದರಿಂದ ಹಲವು ಸಮಸ್ಯೆಗಳು ಎದುರಾಗುತ್ತಿವೆ. ರಾತ್ರಿ ಹೊತ್ತಿನಲ್ಲಿ ನಾಲ್ಕು ಚಕ್ರ ವಾಹನ ಸವಾರರು ಒಂದು ದೀಪದಲ್ಲಿ ವಾಹನ ಚಲಾಯಿಸುತ್ತಾರೆ. ಹಲವು ವಾಹನಗಳಲ್ಲಿ ಇಂಡಿಕೇಟರ್ ಗಳು ಇಲ್ಲದೆ ಅಪಘಾತಗಳು ನಡೆಯುತ್ತಿವೆ. ಇದರ ಬಗ್ಗೆ ಗಮನವಹಿಸಬೇಕು ಎಂದು ಸುದರ್ಶನ್ ಭಟ್ ಹೇಳಿದರು.

ಅಸೈಗೋಳಿ, ಕೊಣಾಜೆ ವ್ಯಾಪ್ತಿಯಲ್ಲಿ ವಾಹನಗಳ ಅತಿವೇಗದ ಚಾಲನೆಯಿಂದ ಹಲವು ಅಪಘಾತಗಳು ನಡೆದಿವೆ. ಒಂದು ವರ್ಷದ ಅವಧಿಯಲ್ಲಿ ಐದು ಮಂದಿ ಜೀವ ಕಳೆದುಕೊಂಡಿದ್ದಾರೆ. ಇದನ್ನು ತಡೆಯುವ ಉದ್ದೇಶದಿಂದ ರಸ್ತೆಗಳಲ್ಲಿ ಉಬ್ಬುಗಳನ್ನು ರಚಿಸಬೇಕಿದೆ ಎಂದು ಕೊಣಾಜೆ ಪಂಚಾಯಿತಿ ಸದಸ್ಯ ಗಣೇಶ್ ಆರೋಪಿಸಿದರು.

ಮುಡಿಪು ಮಂಗಳೂರು ಚಲಿಸುವ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಮಂಗಳೂರಿಗೆ ಟಿಕೆಟ್ ಪಡೆದಲ್ಲಿ ಕಂಕನಾಡಿಯಲ್ಲಿ, ಬಿ.ಸಿ.ರೋಡಿಗೆ ಟಿಕೆಟ್ ನೀಡಿದರೂ ಮುಡಿಪುವಿನಲ್ಲಿ ಇಳಿಸಿ ಬೇರೆ ಬಸ್ಸುಗಳಿಗೆ ಕಳುಹಿಸುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೆ ಬಹಳ ತೊಂದರೆಯಾಗುತ್ತಿದೆ. ಈ ಹಿಂದೆ ಇಂತಹ ಸಮಸ್ಯೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದು ಸರಕಾರಿ ಬಸ್ಸಿಗೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟಿಸಿದ ಫಲವಾಗಿ ಕೆಲ ಸರಕಾರಿ ಬಸ್ಸುಗಳು ಜಾರಿಯಾಗಿದೆ. ಸಮಸ್ಯೆ ಮುಂದುವರಿದಲ್ಲಿ ಮತ್ತೆ ಹೋರಾಟ ನಡೆಸುತ್ತೇವೆ ಎಂದು ಮುಡಿಪು ನಿವಾಸಿ ಜಗದೀಶ್ ಎಂಬವರು ದೂರಿದರು.

ಠಾಣಾಧಿಕಾರಿ ಅಶೋಕ್ ಮಾತನಾಡಿ 12 ಗ್ರಾಮಗಳಲ್ಲಿ 42 ಬೀಟ್ ಗಳನ್ನು ರಚಿಸಲಾಗಿದೆ. ಗ್ರಾಮಸ್ಥರು ಯಾವುದೇ ಸಮಸ್ಯೆ ಅಥವಾ ಮಾಹಿತಿಯಿದ್ದಲ್ಲಿ ಪ್ರದೇಶಕ್ಕೆ ಸಂಬಂಧಿಸಿದ ವ್ಯಕ್ತಿಯಲ್ಲಿ ತಿಳಿಸಬಹುದು. ಈ ಮೂಲಕ ಅಪರಾಧಿ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಧ್ಯ ಎಂದರು.

ಈ ಸಂದರ್ಭ ಎಸ್.ಐ ಸುಕುಮಾರನ್ ಉಪಸ್ಥಿತರಿದ್ದರು.

ಠಾಣಾ ಸಿಬ್ಬಂದಿ ಸುಖಲತಾ ನಿರೂಪಿಸಿದರು. ಪ್ರೊಬೆಷನರಿ ಎಸ್.ಐ ಗುರುವಪ್ಪ ಸಾಂತ ಸ್ವಾಗತಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

By UllalaVaniMarch 12, 20260

ಉಳ್ಳಾಲ: ಮಾದರಿ ಗ್ರಾಮ ಅಭಿಯಾನ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಹಾಗೂ ರಾಷ್ಟ್ರೀಯ ನಿರ್ಮಲ ಗ್ರಾಮ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026
1 2 3 … 1,828 Next
Automatic YouTube Gallery

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
Now Playing
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ನೇತೃತ್ವದಲ್ಲಿ ಮಹಿಳಾ ದಿನಾಚರಣೆ'

ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಅಭಿನಂದನೆ, ಆಟೋಟ ಸ್ಪರ್ಧೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d