Site icon Ullalavani

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ವಶ: ಚಾಲಕನ ಬಂಧನ

UN Networks

ಉಳ್ಳಾಲ: ಕೇರಳ ಕಡೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರಳು ಲಾರಿಯನ್ನು ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ನೆತ್ತಿಲಪದವು ಬಳಿ ಬುಧವಾರ ಪತ್ತೆ ಹಚ್ಚಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ.ಬಂದಿತ ಚಾಲಕನನ್ನು ಬಾಲಕೃಷ್ಣ ಎಂದು ಹೆಸರಿಸಲಾಗಿದೆ.

ಬೆಳ್ತಂಗಡಿ ಮೂಲದವನಾದ ಬಾಲಕೃಷ್ಣ ಉದ್ಯೋಗದಲ್ಲಿ ಚಾಲಕನಾಗಿದ್ದು, ಬುಧವಾರ ಕಲ್ಲಾಪುವಿನಿಂದ ಮಂಜನಾಡಿ ರಸ್ತೆಯಾಗಿ ಕೇರಳ ಕಡೆ ಮರಳು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಮರಳು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version