UN Networks
ಬೋಳಿಯಾರು: ಮುಸ್ಲಿಂ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕಾದ ಧಾರ್ಮಿಕ ಗುರುಗಳನ್ನು ಎಲ್ಲಾ ಪಕ್ಷಗಳು ವೋಟ್ ಹಾಕಲು ಮಾತ್ರ ಮೀಸಲಿಡುತ್ತಿದೆ. ಆದರೆ ಬಿಜೆಪಿ ಮುಕ್ತವಾಗಿ ಮುಸ್ಲಿಂ ಧಾರ್ಮಿಕ ಮುಖಂಡರುಗಳನ್ನು ಮುಖ್ಯವಾಹಿನಿಗೆ ತರಲು ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುತ್ತದೆ ಎಂದು ಫಝಲ್ ಅಸೈಗೋಳಿ ಹೇಳಿದರು.
ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ದ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಬೋಳಿಯಾರ್ ಹಾಲ್ ನಲ್ಲಿ ನೂರಕ್ಕೂ ಅಧಿಕ ಮುಸ್ಲಿಂ ಧಾರ್ಮಿಕ ಮುಖಂಡರು ಸಮ್ಮುಖದಲ್ಲಿ ನಡೆಯುತ್ತಿರುವ ಮುಸ್ಲಿಂ ಧಾರ್ಮಿಕ ಗುರುಗಳ ಸಭೆಯಲ್ಲಿ ಮಾತನಾಡಿದರು.
ಸಭೆಯಲ್ಲಿ ಸಂತೋಷ್ ರೈ ಬೋಳಿಯಾರ, ಜಿಲ್ಲಾ ಅಲ್ಪಾ ಸಂಖ್ಯಾತ ಮೋರ್ಚಾದ ಅಧ್ಯಕ್ಷ ಜೋಯಾಲ್ ಡಿ’ಸೋಜ, ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಆಚಾರ್ಯ, ಅಲ್ಪಸಂಖ್ಯಾತ ಮೋರ್ಚಾ ಪ್ರದಾನ ಕಾರ್ಯದರ್ಶಿ ಮುನೀರ್ ಹಾಜಿ ಉಪಸ್ಥಿತರಿದ್ದಾರೆ.
ಸುದ್ದಿ ಮುಂದುವರಿಯುತ್ತದೆ.



























