UN NETWORKS
ಕುಂಪಲ: ಕುಂಪಲ ಶ್ರೀ ಬಾಲಕೃಷ್ಣ ಮಂದಿರ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 20ನೇ ವರ್ಷದ ಮೊಸರುಕುಡಿಕೆ ಉತ್ಸವವು ಕುಂಪಲ ಶ್ರೀ ಬಾಲಕೃಷ್ಣ ಮಂದಿರದಲ್ಲಿ ಸೋಮವಾರ ನಡೆಯಿತು.
ಧಾರ್ಮಿಕ ಕಾರ್ಯಕ್ರಮಕ್ಕೆ ಶಾಲಿನಿ ಗಣೇಶ್ ಅಂಚನ್ ಕುಂಪಲ ದಂಪತಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ,ಗೌರವ ಅಧ್ಯಕ್ಷ ಕೇಶವದಾಸ್ ಬಗಂಬಿಲ,ಉತ್ಸವ ಸಮಿತಿ ಅಧ್ಯಕ್ಷ ಶಿವಾನಂದ ಟೈಲರ್,ಮಹಿಳಾ ಸಮಿತಿ ಅಧ್ಯಕ್ಷ ಶ್ಯಾಮಲಾ,ಕಾರ್ಯದರ್ಶಿ ರವೀಂದ್ರ ಕುಂಪಲ,ಹರೀಸ್ ಮೂರುಕಟ್ಟೆ,ಶ್ರೀಮತಿ ಲಕ್ಷ್ಮಿ,ಪ್ರವೀಣ್ ಎಸ್.ಕುಂಪಲ,ಉಮೇಶ್ ಗಾಂಬೀರ್,ಎಸ್.ಎಸ್.ನಾಯಕ್,ಮಾದವ ಬಂಗೇರ, ಆನಂದ ಎನ್. ಕೋಟೆಕಾರ್ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಅನಿಲ್ ಬಗಂಬಿಲ, ಪ್ರಧಾನ ಅರ್ಚಕ ಉಗ್ಗಪ್ಪ ಟೈಲರ್,ಕೃಷ್ಣ ಕುಂಪಲ,ಪುಷ್ಪಲತಾ ಡಿ.ಶೆಟ್ಟಿ ಉಪಸ್ಥಿತರಿದ್ದರು.