Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

`ಲೇ ಹುಚ್ಚರೇ.. ಸರಿಯಾಗಿ ಕೆಲ್ಸ ಮಾಡ್ರಿ’: ಗುಡುಗಿದ ಕಾಗೋಡು

UllalaVaniBy UllalaVaniSeptember 18, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

 ಮುಡಿಪು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವ್ಯಕ್ತಿಯೊಬ್ಬನಿಗೆ ಹುಟ್ಟಿದ ನೆಲದ ಒಡೆತನ ಸಿಕ್ಕಾಗ ಸಿಗುವಷ್ಟು ಸಾರ್ಥಕತೆ ಮತ್ತೊಂದಿಲ್ಲ. ಹಾಗಾಗಿ ನೆಲದ ಒಡೆತನದ ಇಲ್ಲದ ಬಡವರು ತಮ್ಮ ಬದುಕಿನಲ್ಲಿ ಸಾರ್ಥಕ್ಯ ಕಾಣಬೇಕು, ನಮ್ಮ ನೆಲದಲ್ಲಿ ನಾವಿದ್ದೇವೆ ಎಂಬ ಭಾವನೆ ಮೂಡಬೇಕು ಎಂಬ ನೆಲೆಯಲ್ಲಿ ಹಕ್ಕುಪತ್ರ ಕೊಡಲಾಗಿದೆ

DSC_7973 DSC_7975 DSC_7976 DSC_7977 DSC_7978 DSC_7979 DSC_7981 DSC_7983 DSC_7985 DSC_7986 DSC_7987 DSC_7991 DSC_7996 DSC_7997 DSC_8000 DSC_8004 DSC_8006 DSC_8010 DSC_8014 DSC_8016

?

DSC_8020 DSC_8022 DSC_8024 DSC_8026 DSC_8029 DSC_8030 DSC_8031 DSC_8035ಹಕ್ಕುಪತ್ರ ಅರ್ಜಿ ಸಲ್ಲಿಕೆ ದಿನಾಂಕ ಅನಿವಾರ್ಯತೆ ಇದ್ದಲ್ಲಿ ವಿಸ್ತರಿಸಲಾಗುವುದು ಎಂದು ಹೇಳುತ್ತಿದ್ದಂತೆ , ನಡುವೆ ಮಾತನಾಡಿದ ಕುರ್ನಾಡು ಜಿ.ಪಂ ಸದಸ್ಯೆ ಮಮತಾ ಗಟ್ಟಿ ಮತ್ತು ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಅವರನ್ನು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ` ಲೇ ಹುಚ್ಚರೇ. ಸರಿಯಾಗಿ ಕೆಲಸ ಮಾಡ್ರಿ’ ಎಂದು ತರಾಟೆಗೆ ತೆಗೆದುಕೊಂಡ ಘಟನೆ ಇತ್ತೀಚೆಗೆ ನಡೆಯಿತು.

ಕರ್ನಾಟಕ ಸರಕಾರ ಕಂದಾಯ ಇಲಾಖೆ ಆಶ್ರಯದಲ್ಲಿ ಮುಡಿಪುವಿನ ಕುರ್ನಾಡು ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಹಕ್ಕುಪತ್ರ ವಿತರಿಸುವ ವೇಳೆ ಇಬ್ಬರ ಮೇಲೆ ಸಚಿವರು ಗುಡುಗಿದರು.

ಉಳುವವನೆ ಹೊಲದೊಡೆಯ ಬದುಕುವವನೇ ನೆಲದೊಡೆಯ. ಆಂದು ಉಳುವವನೆ ನೆಲದೊಡೆಯನ್ನಾಗಿ ಮಾಡಲು 25ವರ್ಷಗಳ ನಿರಂತರ ಹೋರಾಟ ಮಾಡಿದ್ದು ಮುಖ್ಯಮಂತ್ರಿ ದೇವರಾಜ ಅರಸು ಅವರ ಕಾಲದಲ್ಲಿ ಈಡೇರಿತು. ಇಂದು ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತದಲ್ಲಿ ಬದುಕುವನನೇ ನೆಲದೊಡೆಯ ಜಾರಿಗೆ ಬಂದಿದೆ. ಅಷ್ಟಕ್ಕೂ ಸಿದ್ಧರಾಮಯ್ಯ ಅವರು ಆಡಳಿತ ಹಿಡಿಯುವುದಕ್ಕೆ ಮುಂಚೆ ಒಂಬತ್ತು ವರ್ಷ ರಾಜ್ಯದಲ್ಲಿ ಆಡಳಿತ ನಡೆಸಿದವರು ಬಡಜನರಿಗಾಗಿ ಹಕ್ಕುಪತ್ರ ವಿತರಣೆಗೆ ಯಾಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದರು.

ನಾವು ತಿಳಿದುಕೊಳ್ಳಬೇಕಾದ ಸತ್ಯ ಏನಪ್ಪ ಅಂದ್ರೆ ಭೂಮಿ ನಮ್ಮನ್ನು ಬೆನ್ನಹತ್ತಿ ಬರೋದಿಲ್ಲ, ನಾವೇ ಭೂಮಿ ಹಿಂದೆ ಹೋಗಬೇಕು ಎಂದ ಅವರು ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಕೆಯ ದಿನಾಂಕ ಅನಿವಾರ್ಯತೆ ಇದ್ದಲ್ಲಿ ಮುಂದೂಡುತ್ತೇವೆ ಎಂದರು.

ಇವರ ಮಾತಿನ ಮಧ್ಯೆ ಜಿ.ಪಂ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ ಮತ್ತು ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಅವರು ` ಸರ್ ಸ್ವಲ್ಪ ದಿನ ಮುಂದೂಡಿದರೆ ತುಂಬಾ ಸಹಕಾರಿಯಾಗುತ್ತದೆ ‘ ಅಂದರು. ಅಷ್ಟಕ್ಕೇ ಬಿಸಿಯಾದ ಸಚಿವರು ` ಲೇ ಹಚ್ಚರೇ ಮಾಡೋ ಕೆಲ್ಸ ಸರಿಯಾಗಿ ಮಾಡ್ರಿ… ನೀವ್ ಮಾಡಿದ್ರೆ ಜನರಿಗೆ ಕೊಟ್ಟ ತಾರೀಖಿನ ಒಳಗಡೆ ಹಕ್ಕುಪತ್ರ ಸಿಗುವುದು’ ಎಂದರು. ಅಷ್ಟಕ್ಕೇ ವೇದಿಕೆಯಲ್ಲಿದ್ದ ಇಬ್ಬರು ಜನಪ್ರತಿನಿಧಿಗಳು ಇರುಸುಮುರುಸುಗೊಂಡು ಸುಮ್ಮನಾಗಿಬಿಟ್ಟರು.

ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್ ಮಾತನಾಡಿ ರಾಜ್ಯ ಸರಕಾರ ಶಿಕ್ಷಣ, ಆರೋಗ್ಯ, ವಸತಿ ಸೇರಿದಂತೆ ಬಹಳಷ್ಟು ಕ್ರಾಂತಿಕಾರಿ ಯೋಜನೆ ಜಾರಿಗೆ ತಂದಿದೆ. ತಾನು ಸಚಿವನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಕುರ್ನಾಡು ಜಿಲ್ಲಾ ಪಂಚಾಯಿತಿ ಕ್ಷೇತ್ರ ಯಾಪ್ತಿಯ ಜನರ ಹಲವು ದಶಕಗಳ ಹಿಂದಿನ ಬೇಡಿಕೆಯಾಗಿದ್ದ ಪದವಿ ಕಾಲೇಜು ಮಂಜೂರು ಮಾಡಿಸಲಾಗಿದೆ. ಹಾಗೆಯೇ ಪದವಿಪೂರ್ವ ಕಾಲೇಜಿಗೆ ನಾಲ್ಕು ಕೋಟಿ ರೂ. ಗಳ ಅನುದಾನ ಮಂಜೂರು ಮಾಡಿಸಿದ್ದು ಈಗಾಗಲೇ ಮೊದಲ ಹಂತದಲ್ಲಿ ಎರಡು ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತುಳು ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ, ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್, ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಡಾ. ಎಂ.ಆರ್. ರವಿ, ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಪಿ. ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಮಾಣಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯೆ ಮಂಜುಳಾ ಮಾಧವ, ತುಂಬೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ರವೀಂದ್ರ ಕಂಬಳಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರಶಾಂತ್ ಕಾಜವ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್ ಅಬ್ಬಾಸ್, ಕೆಪಿಸಿಸಿ ಕಾರ್ಯದರ್ಶಿ ರಾಜಕುಮಾರ್, ಎಸಿ ರೇಣುಕಾ ಪ್ರಸಾದ್, ಬಂಟ್ವಾಳ ತಾಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ ಹಾಗೂ ಹೈದರ್ ಕೈರಂಗಳ, ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೈಲಜಾ ಮಿತ್ತಕೋಡಿ, ಮಾಜಿ ಅಧ್ಯಕ್ಷ ದೇವದಾಸ್ ಭಂಡಾರಿ ಕುರ್ನಾಡು, ಪುತ್ತೂರು ಎಸಿ ರಘುನಂದನ್, ಪದ್ಮಶ್ರೀ, ಸಿಪ್ರಿಯಾನ್ ಮಿರಾಂಡ ಹಾಗೂ ಪದ್ಮನಾಭ ನರಿಂಗಾನ ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯತಿ ಸದಸ್ಯೆ ಮಮತಾ ಡಿ. ಎಸ್. ಗಟ್ಟಿ ಸ್ವಾಗತಿಸಿದರು. ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

By UllalaVaniJune 13, 20260

ಉಳ್ಳಾಲ, ಜೂನ್ 13: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್, ಉಳ್ಳಾಲ ತಾಲೂಕು ಹಾಗೂ ಇರಾ ಗ್ರಾಮ…

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026

ಸಂತ ಅಲೋಶಿಯಸ್ ಉರ್ವದಲ್ಲಿ ಶಿಕ್ಷಕ ರಕ್ಷಕ ಸಭೆ

June 13, 2026

ಹರೇಕಳ ಗ್ರಾಮ ಪಂಚಾಯತ್ ನಿವೇಶನ ರಹಿತರಿಗೆ ಮೀಸಲಿಟ್ಟ ಜಾಗದ ಅವಸ್ಥೆ ನೋಡಿ..

June 13, 2026
1 2 3 … 1,967 Next
Automatic YouTube Gallery

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ

ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
Now Playing
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ...
ಅಸೈಗೋಳಿಯಲ್ಲಿ ಬಸ್ ತಂಗುದಾಣವಿಲ್ಲ; ಪ್ರಯಾಣಿಕರ ಸಂಕಷ್ಟ;ಮಳೆ-ಬಿಸಿಲಿನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಾರ್ವಜನಿಕರು

ತಕ್ಷಣ ಬಸ್ ತಂಗುದಾಣ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
Now Playing
"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"; ಸಚಿವ ಯು.ಟಿ.ಖಾದರ್
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ...
ತೊಕ್ಕೊಟ್ಟುವಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಲೋಕಾರ್ಪಣೆ;ಉದ್ಘಾಟಿಸಿದ ಆರೋಗ್ಯ ಸಚಿವರಾದ ಯು.ಟಿ.ಖಾದರ್

"ಗ್ಯಾರಂಟಿ ಸದುಪಯೋಗ ಪಡೆದುಕೊಂಡಿವರಿಗೆ ಲಾಭದ ಅರ್ಥವಾಗಿದೆ"
ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಚಿವರಿಗೆ ಅಭಿನಂದನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version