UN NETWORKS
ಉಳ್ಳಾಲ: ಅಪಘಾತ ಸಂದರ್ಭದಲ್ಲಿ ಘಟನೆಯ ಸ್ಥಳದಿಂದ ಆಸ್ಪತ್ರೆಯ ತುರ್ತು ವಿಭಾಗಕ್ಕೆ ಗಾಯಾಳುವನ್ನು ಸಾಗಿಸುವಾಗ ಸರಿಯಾದ ಆರೋಗ್ಯ ಕ್ರಮಗಳನ್ನು ಪಾಲನೆ ಮಾಡದಿದ್ದರೆ ತೊಂದರೆಗಳು ಜಾಸ್ತಿ ಎಂದು ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ (ಕ್ಷೇಮ) ಡೀನ್ ಡಾ| ಪ್ರಕಾಶ್ ಪಿ.ಎಸ್. ಅಭಿಪ್ರಾಯಪಟ್ಟರು.
ರೋಗಿಗಳು ಮತ್ತು ಗಾಯಾಳುಗಳನ್ನು ಸಾಗಿಸುವಾಗ ಅತ್ಯಂತ ಜಾಗರೂಕತೆ ವಹಿಸುವ ಅಗತ್ಯ ಇದೆ. ಇದರ ಕುರಿತು ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸುವ ಅಗತ್ಯ ಇದೆ. ರೋಗಿಗಳ ಅಸಮರ್ಪಕ ನಿರ್ವಹಣೆಯಿಂದ ಫಲಿತಾಂಶ ಕೆಟ್ಟದಾಗುವ ಸಾಧ್ಯತೆಗಳಿವೆ ಎಂದರು.
ಕಾರ್ಯಕ್ರಮದಲ್ಲಿ ಕ್ಷೇಮದ ಕುಲಸಚಿವ ಡಾ| ಜಯಪ್ರಕಾಶ ಶೆಟ್ಟಿ, ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಶಿವಕುಮಾರ್ ಹಿರೇಮಠ್, ನಿಟ್ಟೆ ಸಿಮ್ಯುಲೇಶನ್ ಕೇಂದ್ರದ ಸಂಯೋಜಕ ಡಾ| ರವೀಂದ್ರ ಯು. ಎಸ್. ಮತ್ತಿತರರು ಉಪಸ್ಥಿತರಿದ್ದರು.
ಎಲುಬು ಮತ್ತು ಕೀಲು ವಿಭಾಗದ ಹೆಚ್ಚುವರಿ ಪ್ರಾಧ್ಯಾಪಕ ಡಾ| ಸಿದ್ಧಾರ್ಥ ಶೆಟ್ಟಿ ಸ್ವಾಗತಿಸಿದರು. ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ| ರಾಜಶೇಖರ ಮೋಹನ್ ವಂದಿಸಿದರು. ಅರಿವಳಿಕೆ ಶಾಸ್ತ್ರದ ಪ್ರಾಧ್ಯಾಪಕ ಡಾ| ಶ್ರೀಪಾದಜಿ ಮೆಹೆಂದಳೆ ಕಾರ್ಯಕ್ರಮ ನಿರ್ವಹಿಸಿದರು. ಮೂವತ್ತೈದಕ್ಕೂ ಮಿಕ್ಕಿ ಬೇರೆ ಬೇರೆ ಸಂಸ್ಥೆಗಳ ವೈದ್ಯರು ಹಾಗು ಅರೆ ವೈದ್ಯಕೀಯ ಸಿಬ್ಬಂದಿ ತರಬೇತಿ ಪಡೆದು ಅಮೇರಿಕಾದ ಸಂಸ್ಥೆಯಿಂದ ಪ್ರಮಾಣಪತ್ರ ಪಡೆದುಕೊಂಡರು.