UN NETWORKS
ಮಂಗಳೂರು : ಮಂಗಳೂರು ದಕ್ಷಿಣ ಉಪವಿಭಾಗದ ರೌಡಿ ನಿಗ್ರಹ ದಳದ ಸಹಾಯಕ ಪೊಲಿಸ್ ಆಯುಕ್ತರಿಗೆ ಈ ಮೊದಲು ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿಯಂತೆ ಈ ಮೊದಲು ನಿಖಿಲ್ ಕೆ.ಬಿ., ಶ್ರವಣ ಪೂಜಾರಿ, ರೋಶನ್ ವೇಗಸ್, ಬಾಶೀಂ ಬಶೀರ್ ಎಂಬವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಿಂದ ಎಂ ಡಿ ಎಂ ಪೀಲ್ಸ್ -93, ಹುಂಡೈ ಇಯಾನ್ ಕಾರು-1, ಮೊಬೈಲ್ ಪೋನ್-3 ಹಾಗೂ 30,850 ನಗದು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಳ್ಳಲಾದ ಸೊತ್ತುಗಳ ಮೌಲ್ಯ 2,36,000ರೂ. ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿ ಕಾರ್ಲ್ ಎಂಬಾತನ ಮೇಲೆ 2014 ಮತ್ತು 2015ರಲ್ಲಿ ಎನ್.ಸಿ.ಬಿ. ಬೆಂಗಳೂರು ಇಲ್ಲಿ ಪ್ರಕರಣಗಳು ದಾಖಲಾಗಿವೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ರೌಡಿ ನಿಗ್ರಹ ದಳದ ಎ ಸಿ ಪಿ ಶ್ರೀ ರಾಮರಾವ್ ಅವರು ಉಳ್ಳಾಲ ಠಾಣಾ ಪಿಎಸ್ಐ ಗುರಪ್ಪ ಕಾಂತಿ ಮತ್ತು ಸಿಬ್ಬಂದಿಯವರಾದ ಎಎಸ್ಐ ಸುಂದರ ಅಚಾರ್, ಎಚ್ಸಿಗಳಾದ ಮೋಹನ್ ಕೆ.ವಿ., ಗಿರೀಶ್ ಬೆಂಗ್ರೆ, ರವಿನಾಥ್, ಮುಲ್ಕಿ, ಸುನೀಲ್ ಕುಮಾರ್, ರೆಜಿ ವಿ.ಎಂ, ರವಿಚಂದ್ರ ಪಡ್ರೆ , ದಾಮೋದರ, ರಾಜರಾಮ ಕೆ., ಮುಹಮ್ಮದ್ ಶರೀಫ್, ದಯಾನಂದ, ಸುಧೀರ್ ಶೆಟ್ಟಿ, ಮಹೇಶ್ ಪಾಟಾಳಿ ಮತ್ತು ಮುಹಮ್ಮದ್ ಇಕ್ಬಾಲ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.