Site icon Ullalavani

ರಿಕ್ಷಾ ಚಾಲಕನಿಗೆ ಹಲ್ಲೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಖಾದರ್

UN NETWORKS

ಉಳ್ಳಾಲ: ಜೆಪ್ಪಿನಮೊಗರು ದುಷ್ಕರ್ಮಿಗಳಿಂದ ದಾಳಿಗೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಕೀರ್ ಅಲೇಕಲ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಯು.ಟಿ.ಖಾದರ್ ರವರು ಭೇಟಿ ಮಾಡಿ ಸಾಂತ್ವನ ಹೇಳಿದರು.

ದಾಳಿಗೀಡಾದ ಸಂಧರ್ಭದಲ್ಲಿ ಸಾಹಸ ಮೆರೆದು ದುಷ್ಕರ್ಮಿಗಳಿಂದ ತಪ್ಪಿಸಿ,ಕಾರು ನಂಬರನ್ನು ನೋಟ್ ಮಾಡಿ ಆರೋಪಿಗಳನ್ನು ಬಂಧಿಸಲು ಸಹಕರಿಸಿದ ಶಾಕೀರ್ ರವರನ್ನು ಸಚಿವರು ಅಭಿನಂದಿಸಿದರು.ಈ ಸಂಧರ್ಭದಲ್ಲಿ ಕಿನ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿರಾಜ್ ಕಿನ್ಯ ಜತೆಗಿದ್ದರು.

Exit mobile version