UN NETWORKS
ಮುಡಿಪು: ಸ್ವಚ್ಚತೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಾಗಿದ್ದು ಈ ನಿಟ್ಟಿನಲ್ಲಿ ಯುವ ಸಮುದಾಯ ಸ್ವಚ್ಚತೆಯೊಂದಿಗೆ ಮಾದರಿ ಸಮಾಜ ನಿರ್ಮಿಸಲು ಪಣತೊಡಬೇಕು ಎಂದು ಪಜೀರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ಪಜೀರು ಪಂಚಾಯಿತಿ ಉಪಾಧ್ಯಕ್ಷರಾದ ಜ್ಯೋತಿ, ತಾಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ, ಮಾಜಿ ಸದಸ್ಯರಾದ ಉಮ್ಮರ್ ಪಜೀರು, ಪಂಚಾಯಿತಿ ಮಾಜಿ ಅಧ್ಯಕ್ಷರಾದ ಇಂತಿಯಾಝ್, ಪ್ಲೋರಿನ ಡಿಸೋಜ, ನಝೀರ್ ಮೊಯ್ದಿನ್, ಮುಖಂಡರಾದ ಪದ್ಮನಾಭ ನರಿಂಗಾನ, ಸಮೀರ್ ಪಜೀರು, ಸದಸ್ಯರಾದ ರಫೀಕ್ ಮೊದಲಾದವರು ಉಪಸ್ಥಿತರಿದ್ದರು.