Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ನರಿಂಗಾನ

ನರಿಂಗಾನ: ಸೌರ್ಕುಡೇಲು ಕಿರು ಸೇತುವೆಗೆ ಶಿಲಾನ್ಯಾಸ

UllalaVaniBy UllalaVaniMarch 2, 2015Updated:March 2, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

1ullal BRIDGE

ಉಳ್ಳಾಲ: ಯಾವುದೇ ಪ್ರದೇಶದ ಅಭಿವೃದ್ಧಿ ಆಗಬೇಕಾದರೆ ಆ ಭಾಗದ ಜನತೆ ಹಾಗೂ ಜವಾಬ್ದಾರಿಯುತ ಸಂಘ ಸಂಸ್ಥೆಗಳು ಸಂಘಟನೆಗಳ ಪಾತ್ರ ಬಹು ಮುಖ್ಯ. ಆ ನಿಟ್ಟಿನಲ್ಲಿ ನರಿಂಗಾನ ಗ್ರಾಮದ ಸೌರ್ಕುಡೇಲಿನಲ್ಲಿ ನೂತನ ಕಿರು ಸೇತುವೆ ನಿರ್ಮಾಣಕ್ಕಾಗಿ ಸಂಘ ಸಂಸ್ಥೆಗಳು ಹಾಗೂ ಇಲ್ಲಿನ ಜನರು ವಿವಿಧ ರೀತಿಯಲ್ಲಿ ಶ್ರಮಿಸಿದ್ದಾರೆ. ನೂತನ ಸೇತುವೆ ನಿರ್ಮಾಣದ ಮೂಲಕ ಅವರೆಲ್ಲರ ನಿರೀಕ್ಷೆ ಶೀಘ್ರದಲ್ಲಿ ಈಡೇರಲಿದ್ದು, ಈ ಯೋಜನೆಗೆ ಸಹಕರಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ರಾಜ್ಯಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಆಭಿಪ್ರಾಯಪಟ್ಟರು.
ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್‍ನಿಂದ ತೌಡುಗೋಳಿ ಸಂಪರ್ಕ ರಸ್ತೆಯ ಸರ್ಕುಡೇಲಿನಲ್ಲಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಿರು ಸೇತುವೆಗೆ ಭಾನುವಾರ ಶಿಲಾನ್ಯಾಸಗೈದು ಅವರು ಮಾತನಾಡಿದರು.
ನರಿಂಗಾನ ಭಾಗದ ಅತಿಮುಖ್ಯ ಸೇತುವೆ ಸರ್ಕುಡೇಲು ಸೇತುವೆ ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ಪ್ರಮುಖ ಕೊಂಡಿಯೇ ಆಗಿದೆ. ಸೇತುವೆ ನಿರ್ಮಾಣ ಕಾಲದಲ್ಲಿ ಇಲ್ಲಿನ ಭೂಮಾಲೀಕರು ಪರೋಪಕಾರಿ ಭಾವನೆ ತೋರಿದ ಹಿನ್ನೆಲೆಯಲ್ಲಿ ಸುಮಾರು ಐದು ದಶಕಗಳ ಹಿಂದೆಯೇ ಈ ವ್ಯಾಪ್ತಿಯಲ್ಲಿ ಮೊತ್ತಮೊದಲ ಸದೃಢ ಸೇತುವೆ ನಿರ್ಮಾಣವಾಗಲು ಸಾಧ್ಯವಾಗಿತ್ತು. ಕಾಲಕ್ರಮೇಣ ಸೇತುವೆ ಶಿಥಿಲಗೊಂಡಿದ್ದು ನೂತನ ಸೇತುವೆ ನಿರ್ಮಾಣ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದ್ದು ಕಾಮಗಾರಿ ಸಂದರ್ಭ ಸ್ಥಳೀಯರ ಸಹಕಾರ ಅತ್ಯಗತ್ಯ ಎಂದು ನುಡಿದರು.
ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಸಾಲಿನಲ್ಲಿ ಬಹಳಷ್ಟು ಕಾಮಗಾರಿಗಳನ್ನು ನಡೆಸಲಾಗಿದ್ದು ಮುಖ್ಯವಾಗಿ ಜನರಿಗೆ ಮೂಲ ಸೌಲಭ್ಯ ಒದಗಿಸುವತ್ತ ಆದ್ಯತೆ ನೀಡಲಾಗುತ್ತಿದೆ. ಅದರಂತೆ ರಸ್ತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆಯನ್ನು ಎಲ್ಲ ಭಾಗದಲ್ಲಿ ಅಳವಡಿಸುವ ಪ್ರಯತ್ನ ನಡೆದಿದೆ. ಕೆಲವು ಭಾಗದಲ್ಲಿ ತಾಂತ್ರಿಕ ತೊಂದರೆಗಳಿಂದ ಕಾಮಗಾರಿ ವಿಳಂಬವಾಗಿದ್ದರೂ ಕಾಮಗಾರಿ ಪೂರ್ಣಗೊಳಿಸಿದ ತೃಪ್ತಿ ಇದೆ ಎಂದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷೆ ಜಯಂತಿ ಎಸ್. ಉಪಾಧ್ಯಕ್ಷ ಶೇಖಬ್ಬ ನಿಡ್ಮಾಡ್, ಪಂಚಾಯಿತಿ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ, ಇಸ್ಮಾಯಿಲ್ ಮೀನಂಕೋಡಿ, ಅಬ್ದುಲ್ಲ ಕೊಡಂಚಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ವಲಯ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ಮೋರ್ಲಗುತ್ತು, ಮುಡಿಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೊಂಟುಗೋಳಿ, ಡಾ. ಉದಯಶಂಕರ್ ಭಟ್ ಸೌರ್ಕುಡೇಲು, ನರಿಂಗಾನ ಯುವಕ ಮಂಡಲದ ಅಧ್ಯಕ್ಷ ನವೀನ್ ಶೆಟ್ಟಿ ಮಂಗಲ್ಪಾಡಿ, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಎಲ್ ಸರ್ಕುಡೇಲು, ಸ್ಥಳೀಯರಾದ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು, ಮುರಳೀಧರ ಶೆಟ್ಟಿ ಮೋರ್ಲ, ಚಂದ್ರಹಾಸ್ ಪೂಜಾರಿ ಸರ್ಕುಡೇಲು, ಲಿಂಗಪ್ಪ ಪೂಜಾರಿ ಸರ್ಕುಡೇಲು ಹಾಗೂ ಪುರಂದರ ಸರ್ಕುಡೇಲು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಂಬಳ ನಮ್ಮ ದೇಶದ ಆಸ್ತಿ, ಸಂಸ್ಕೃತಿಯ ಪ್ರತೀಕ: ಡಿ.ಕೆ.ಶಿವಕುಮಾರ್

January 12, 2026

ಈ ಬಾರಿಯ ನರಿಂಗಾನ ಕಂಬಳದ ವಿಶೇಷತೆಗಳೇನು..??

January 6, 2026

ನರಿಂಗಾನ ಕಲ್ಲರಕೋಡಿ ಶಾಲಾ ದೈಹಿಕ ಶಿಕ್ಷಕ ಆತ್ಮಹತ್ಯೆ…!!

December 20, 2025
Leave A Reply

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

By UllalaVaniFebruary 4, 20260

ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
1 2 3 … 1,792 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d