UN NETWORKS
ಉಳ್ಳಾಲ: ನಾಟೆಕಲ್ನಲ್ಲಿ ಮಸೀದಿ, ಅಂಗಡಿಗಳಿಗೆ ದಾಂಧಲೆ ನಡೆಸಿ ಗಲಭೆಗೆ ಪ್ರಚೋದಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಹಿಂದಿರುವ ಶಕ್ತಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಾಟೆಕಲ್ ವರ್ತಕರ ಸಂಘ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಅವರಿಗೆ ಗುರುವಾರ ಮನವಿ ಸಲ್ಲಿಸಿತು.
ಈ ವೇಳೆ ನಾಟೆಕಲ್ ವರ್ತಕರ ಸಂಘದ ಅಧ್ಯಕ್ಷ ಹನೀಫ್, ಉಪಾಧ್ಯಕ್ಷ ಅನಂದ್. ಕಾರ್ಯದರ್ಶಿ ಇಮ್ರಾನ್, ಜೊತೆ ಕಾರ್ಯದರ್ಶಿ ಕೆ ಮೊಹಮ್ಮದ್. ಮಾಧ್ಯಮ ಸಲಹೆಗಾರ ಅಬ್ಬಾಸ್ ಕಿನ್ಯ, ಸದಸ್ಯರಾದ ಇಬ್ರಾಹಿಂ ಸಾಧಿಕ್, ಎ.ಎಸ್ ಮೊಹಮ್ಮದ್, ಹನೀಫ್ ನಡುದಾರಿ ಉಪಸ್ಥಿತರಿದ್ದರು.