Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಹಿಂದೂಧರ್ಮವನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ನಿಂದಿಸುವುದು ತಪ್ಪು: ನವನೀತ ಶೆಟ್ಟಿ ಕದ್ರಿ

UllalaVaniBy UllalaVaniMarch 2, 2015Updated:March 26, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ : ಯುಗಧರ್ಮದಂತೆ ಬದಲಾವಣೆ ಸಹಜವಾಗಿದ್ದು ಧಾರ್ಮಿಕ ವ್ಯವಸ್ಥೆಯಲ್ಲಿಯೂ ಬದಲಾವಣೆ ಅನಿವಾರ್ಯ. ಹಿಂದಿನ ಕಾಲದ ವ್ಯವಸ್ಥೆಗಳನ್ನು ಪ್ರಸ್ತುತ ಕಾಲಕ್ಕೆ ತಕ್ಕಂತೆ ಬದಲಾವಣೆ ಮಾಡಿದಾಗ ಅದನ್ನು ವಿರೋಧಿಸುವುದಕ್ಕಿಂತ ಒಪ್ಪಿಕೊಳ್ಳಬೇಕಾಗುತ್ತದೆ. ಯಾಕೆಂದರೆ ವಿಶಾಲವಾಗಿರುವ ಹಿಂದೂ ಧರ್ಮವನ್ನು ಅರಿತುಕೊಳ್ಳುವುದೇ ಬಹಳಷ್ಟಿರುವಾಗ ಅಲ್ಪಸ್ವಲ್ಪ ತಿಳಿದುಕೊಂಡು ಅದರಲ್ಲಿನ ಆಚರಣೆ, ಪದ್ಧತಿಗಳು, ನಂಬಿಕೆಗಳನ್ನು ಅರ್ಥೈಸಿಕೊಳ್ಳದೆ ನಿಂದಿಸುವುದು ತಪ್ಪು ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯ ಪ್ರಸರಣಾಧಿಕಾರಿ ನವನೀತ ಶೆಟ್ಟಿ ಕದ್ರಿ ಅಭಿಪ್ರಾಯಪಟ್ಟರು.

ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರು ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆಯುತ್ತಿರುವ ಆರನೆಯ ದಿನದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು.

1ullal2

ವಿಶ್ವಾಮಿತ್ರ ನಾಯಿ ಮಾಂಸ ತಿಂದನೆಂದು ಅವರನ್ನು ದೂಷಿಸುವುದಕ್ಕಿಂತ ವಿಶ್ವಾಮಿತ್ರರು ನಾಯಿ ಮಾಂಸವನ್ನು ಮಂತ್ರಶಕ್ತಿಯಿಂದ ಸ್ವಚ್ಛಗೊಳಿಸಿ ತಿಂದು, ಆ ಮೂಲಕ ಭೂಲೋಕದ ಬರಗಾಲವನ್ನು ದೇವತೆಗಳಿಗೆ ತಿಳಿಸುವ ಪ್ರಯತ್ನವನ್ನು ಮಾಡಿದ್ದರು ಎಂಬ ಮರ್ಮ ಅರಿಯದವರು ಹಿಂದೂಗಳನ್ನು ದೂರದೆ ಮತ್ತೇನು ಮಾಡಿಯಾರು? ಅಷ್ಟಕ್ಕೂ ಹಾಗೆ ದೂರುವವರು ಅಪ್ಪಟ ಹಿಂದೂಗಳಾಗಲು ಸಾಧ್ಯವಿಲ್ಲ. ಯಾಕೆಂದರೆ ಪ್ರಪಂಚದ ಎಲ್ಲ ಭಾಗದಲ್ಲಿ ಬೇರೂರಿದ್ದ ಆರಾಧನೆ ಪದ್ಧತಿ, ಕಾಲಕ್ರಮೇಣ ಬೇರೆ ಬೇರೆ ರೂಪ ಹಾಗೂ ಬೇರೆ ಬೇರೆ ಸ್ವರೂಪದಲ್ಲಿ ಆರಾಧಿಸುವ ಪರಿಕಲ್ಪನೆ ಬೆಳೆದು ಬಂತು. ಮುಂದೆ ವ್ಯಕ್ತಿ, ಮತದ ಮೂಲಕ ರಾಷ್ಟಿ ್ರಯ ಚಿಂತನೆಗಳು ಪ್ರಧಾನವಾಯಿತು. ಕೆಲವೆಡೆ ಮತವೇ ಪ್ರಧಾನವಾಗಿ ಬದಲಾಯಿತು ಎಂದರು.
ಎಲ್ಲ ಭಾಗದಲ್ಲಿ ಭಾಷೆ ಜನರನ್ನು ಒಟ್ಟು ಮಾಡಿದರೆ ಭಾರತದಲ್ಲಿ ಭಾಷಾ ವಿಷಯವೇ ನಮ್ಮನ್ನು ದೂರ ಮಾಡಿದೆ. ಆದರೆ ಧರ್ಮ ಮಾತ್ರ ನಮ್ಮನ್ನು ಒಂದು ಮಾಡಿದೆ. ಕಾಶಿಯಲ್ಲಿರುವ ವಿಶ್ವನಾಥನಾಗಲೀ, ತಿರುಪತಿಯಲ್ಲಿರುವ ಶ್ರೀನಿವಾಸನಾಗಲೀ ಬೇರೆ ಭಾಷೆ ಮಾತನಾಡುವ ಜನರ ರಾಜ್ಯದಲ್ಲಿದ್ದರೂ ಅದು ನಮ್ಮ ದೇವರು ಎಂಬ ಭಾವ ನಮ್ಮಲ್ಲಿದೆ. ಕದ್ರಿ ಜೋಗಿ ಮಠದಲ್ಲಿ ಇಂದಿಗೂ ಉತ್ತರ ಭಾರತದ ಪ್ರಧಾನರುಗಳ ತೀರ್ಮಾನವೇ ಆಂತಿಮ. ಹಾಗಾಗಿ ಧರ್ಮ ದೇಶದ ಎಲ್ಲ ಮೂಲೆಯ ಜನರನ್ನು ಒಂದು ಮಾಡಿದೆ ಎಂದರು.

ಮರದ ಹುಳ ಮರವನ್ನೇ ತಿನ್ನುತ್ತದೆ ಎಂಬ ಹಾಗೆ ನಮ್ಮ ಧರ್ಮಕ್ಕೆ ನಮ್ಮ ಧರ್ಮದವರೇ ಶತ್ರುಗಳು. ನಮ್ಮ ಧರ್ಮದ ಬೆಳವಣಿಗೆಗೆ ಇನ್ನೊಂದು ಧರ್ಮದ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ದುರ್ಜನರು ಸಬಲರಾಗುವುದು ಸಜ್ಜನರು ಮೌನಿಗಳಾದಾಗ ಎಂಬ ನುಡಿ ಸದಾ ನಮ್ಮ ಮನದಲ್ಲಿರಬೇಕು ಎಂದು ನುಡಿದರು.

ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಕೊಂಡೆವೂರಿನ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಆಧ್ಯಕ್ಷ ರಾಮ್ ಮನೋಹರ್ ರೈ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಸಿ.ಆಳ್ವ ನೆತ್ತಿಬಾಳಿಕೆ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಬಂಗ್ರ ಮಂಜೇಶ್ವರ ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿಶ್ಚಂದ್ರ ಶೆಟ್ಟಿಗಾರ್, ಮರೋಳಿಯ ಸೂರ್ಯ ನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಕೊಟ್ಟಾರಿ, ಮಂಗಳೂರಿನ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಡಾ. ಅಣ್ಣಯ್ಯ ಕುಲಾಲ್, ನಿವೃತ್ತ ಸಹಾಯಕ ಶಿಕ್ಷಣಾಧಿಕಾರಿ ರಘುರಾಮ್ ಭಟ್ ಬೆಳ್ಳೂರು, ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ನನ್ಯ ಆಚ್ಯುತ ಮೂಡಿತ್ತಾಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ನ್ಯಾಯವಾದಿ ರವೀಂದ್ರನಾಥ ರೈ ಸ್ವಾಗತಿಸಿದರು. ರವಿ ಅಲೆವೂರಾಯ ಕಾರ್ಯಕ್ರಮ ನಿರೂಪಿಸಿದರು. ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ನಾರಾಯಣ ಕಜೆ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

ಸೌಹಾರ್ದಕ್ಕೆ ಸಾಕ್ಷಿಯಾದ ಪಿಲಾರು ನಾಗಬ್ರಹ್ಮ ಕ್ಷೇತ್ರ ವಾರ್ಷಿಕೋತ್ಸವ

February 3, 2026
Leave A Reply

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

By UllalaVaniFebruary 5, 20260

ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026
1 2 3 … 1,793 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d