Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಹಿಂದೂಧರ್ಮವನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ನಿಂದಿಸುವುದು ತಪ್ಪು: ನವನೀತ ಶೆಟ್ಟಿ ಕದ್ರಿ

UllalaVaniBy UllalaVaniMarch 2, 2015Updated:March 26, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ : ಯುಗಧರ್ಮದಂತೆ ಬದಲಾವಣೆ ಸಹಜವಾಗಿದ್ದು ಧಾರ್ಮಿಕ ವ್ಯವಸ್ಥೆಯಲ್ಲಿಯೂ ಬದಲಾವಣೆ ಅನಿವಾರ್ಯ. ಹಿಂದಿನ ಕಾಲದ ವ್ಯವಸ್ಥೆಗಳನ್ನು ಪ್ರಸ್ತುತ ಕಾಲಕ್ಕೆ ತಕ್ಕಂತೆ ಬದಲಾವಣೆ ಮಾಡಿದಾಗ ಅದನ್ನು ವಿರೋಧಿಸುವುದಕ್ಕಿಂತ ಒಪ್ಪಿಕೊಳ್ಳಬೇಕಾಗುತ್ತದೆ. ಯಾಕೆಂದರೆ ವಿಶಾಲವಾಗಿರುವ ಹಿಂದೂ ಧರ್ಮವನ್ನು ಅರಿತುಕೊಳ್ಳುವುದೇ ಬಹಳಷ್ಟಿರುವಾಗ ಅಲ್ಪಸ್ವಲ್ಪ ತಿಳಿದುಕೊಂಡು ಅದರಲ್ಲಿನ ಆಚರಣೆ, ಪದ್ಧತಿಗಳು, ನಂಬಿಕೆಗಳನ್ನು ಅರ್ಥೈಸಿಕೊಳ್ಳದೆ ನಿಂದಿಸುವುದು ತಪ್ಪು ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯ ಪ್ರಸರಣಾಧಿಕಾರಿ ನವನೀತ ಶೆಟ್ಟಿ ಕದ್ರಿ ಅಭಿಪ್ರಾಯಪಟ್ಟರು.

ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರು ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆಯುತ್ತಿರುವ ಆರನೆಯ ದಿನದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು.

1ullal2

ವಿಶ್ವಾಮಿತ್ರ ನಾಯಿ ಮಾಂಸ ತಿಂದನೆಂದು ಅವರನ್ನು ದೂಷಿಸುವುದಕ್ಕಿಂತ ವಿಶ್ವಾಮಿತ್ರರು ನಾಯಿ ಮಾಂಸವನ್ನು ಮಂತ್ರಶಕ್ತಿಯಿಂದ ಸ್ವಚ್ಛಗೊಳಿಸಿ ತಿಂದು, ಆ ಮೂಲಕ ಭೂಲೋಕದ ಬರಗಾಲವನ್ನು ದೇವತೆಗಳಿಗೆ ತಿಳಿಸುವ ಪ್ರಯತ್ನವನ್ನು ಮಾಡಿದ್ದರು ಎಂಬ ಮರ್ಮ ಅರಿಯದವರು ಹಿಂದೂಗಳನ್ನು ದೂರದೆ ಮತ್ತೇನು ಮಾಡಿಯಾರು? ಅಷ್ಟಕ್ಕೂ ಹಾಗೆ ದೂರುವವರು ಅಪ್ಪಟ ಹಿಂದೂಗಳಾಗಲು ಸಾಧ್ಯವಿಲ್ಲ. ಯಾಕೆಂದರೆ ಪ್ರಪಂಚದ ಎಲ್ಲ ಭಾಗದಲ್ಲಿ ಬೇರೂರಿದ್ದ ಆರಾಧನೆ ಪದ್ಧತಿ, ಕಾಲಕ್ರಮೇಣ ಬೇರೆ ಬೇರೆ ರೂಪ ಹಾಗೂ ಬೇರೆ ಬೇರೆ ಸ್ವರೂಪದಲ್ಲಿ ಆರಾಧಿಸುವ ಪರಿಕಲ್ಪನೆ ಬೆಳೆದು ಬಂತು. ಮುಂದೆ ವ್ಯಕ್ತಿ, ಮತದ ಮೂಲಕ ರಾಷ್ಟಿ ್ರಯ ಚಿಂತನೆಗಳು ಪ್ರಧಾನವಾಯಿತು. ಕೆಲವೆಡೆ ಮತವೇ ಪ್ರಧಾನವಾಗಿ ಬದಲಾಯಿತು ಎಂದರು.
ಎಲ್ಲ ಭಾಗದಲ್ಲಿ ಭಾಷೆ ಜನರನ್ನು ಒಟ್ಟು ಮಾಡಿದರೆ ಭಾರತದಲ್ಲಿ ಭಾಷಾ ವಿಷಯವೇ ನಮ್ಮನ್ನು ದೂರ ಮಾಡಿದೆ. ಆದರೆ ಧರ್ಮ ಮಾತ್ರ ನಮ್ಮನ್ನು ಒಂದು ಮಾಡಿದೆ. ಕಾಶಿಯಲ್ಲಿರುವ ವಿಶ್ವನಾಥನಾಗಲೀ, ತಿರುಪತಿಯಲ್ಲಿರುವ ಶ್ರೀನಿವಾಸನಾಗಲೀ ಬೇರೆ ಭಾಷೆ ಮಾತನಾಡುವ ಜನರ ರಾಜ್ಯದಲ್ಲಿದ್ದರೂ ಅದು ನಮ್ಮ ದೇವರು ಎಂಬ ಭಾವ ನಮ್ಮಲ್ಲಿದೆ. ಕದ್ರಿ ಜೋಗಿ ಮಠದಲ್ಲಿ ಇಂದಿಗೂ ಉತ್ತರ ಭಾರತದ ಪ್ರಧಾನರುಗಳ ತೀರ್ಮಾನವೇ ಆಂತಿಮ. ಹಾಗಾಗಿ ಧರ್ಮ ದೇಶದ ಎಲ್ಲ ಮೂಲೆಯ ಜನರನ್ನು ಒಂದು ಮಾಡಿದೆ ಎಂದರು.

ಮರದ ಹುಳ ಮರವನ್ನೇ ತಿನ್ನುತ್ತದೆ ಎಂಬ ಹಾಗೆ ನಮ್ಮ ಧರ್ಮಕ್ಕೆ ನಮ್ಮ ಧರ್ಮದವರೇ ಶತ್ರುಗಳು. ನಮ್ಮ ಧರ್ಮದ ಬೆಳವಣಿಗೆಗೆ ಇನ್ನೊಂದು ಧರ್ಮದ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ದುರ್ಜನರು ಸಬಲರಾಗುವುದು ಸಜ್ಜನರು ಮೌನಿಗಳಾದಾಗ ಎಂಬ ನುಡಿ ಸದಾ ನಮ್ಮ ಮನದಲ್ಲಿರಬೇಕು ಎಂದು ನುಡಿದರು.

ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಕೊಂಡೆವೂರಿನ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಆಧ್ಯಕ್ಷ ರಾಮ್ ಮನೋಹರ್ ರೈ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಸಿ.ಆಳ್ವ ನೆತ್ತಿಬಾಳಿಕೆ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಬಂಗ್ರ ಮಂಜೇಶ್ವರ ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿಶ್ಚಂದ್ರ ಶೆಟ್ಟಿಗಾರ್, ಮರೋಳಿಯ ಸೂರ್ಯ ನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಕೊಟ್ಟಾರಿ, ಮಂಗಳೂರಿನ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಡಾ. ಅಣ್ಣಯ್ಯ ಕುಲಾಲ್, ನಿವೃತ್ತ ಸಹಾಯಕ ಶಿಕ್ಷಣಾಧಿಕಾರಿ ರಘುರಾಮ್ ಭಟ್ ಬೆಳ್ಳೂರು, ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ನನ್ಯ ಆಚ್ಯುತ ಮೂಡಿತ್ತಾಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ನ್ಯಾಯವಾದಿ ರವೀಂದ್ರನಾಥ ರೈ ಸ್ವಾಗತಿಸಿದರು. ರವಿ ಅಲೆವೂರಾಯ ಕಾರ್ಯಕ್ರಮ ನಿರೂಪಿಸಿದರು. ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ನಾರಾಯಣ ಕಜೆ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮುಡಿಪು : ಭಾರತ್ ಚಿಕನ್ ಸ್ಟಾಲ್ ಮಾಲೀಕ ಹೃದಯಾಘಾತಕ್ಕೆ ಬಲಿ..!

May 30, 2026

ಬಾಳೆಪುಣಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

May 28, 2026

ಹಿದಾಯತ್ ನಗರ ಸಂಭ್ರಮದ ಬಕ್ರೀದ್ ಆಚರಣೆ

May 28, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025
suddi

ಮಂಗಳೂರು ನಗರದಲ್ಲಿ ಯೂಟ್ಯೂಬರ್ ಗಳ ಹಾವಳಿ, ಸುದ್ದಿಯ ರಭಸದಲ್ಲಿ ವಿಡಿಯೊದಲ್ಲಿ ಹೇಳಿಕೆ ವಿವಾದ : ಬಿಎನ್‌ಎಸ್ ಸೆಕ್ಷನ್ 196 ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲು

By UllalaVaniMay 30, 20260

ಮಂಗಳೂರು: ಸಾಮಾಜಿಕ ಜಾಲತಾಣ ಹಾಗೂ ಯೂಟ್ಯೂಬ್‌ ವೇದಿಕೆಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿನ ಹೇಳಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196…

ಮುಡಿಪು : ಭಾರತ್ ಚಿಕನ್ ಸ್ಟಾಲ್ ಮಾಲೀಕ ಹೃದಯಾಘಾತಕ್ಕೆ ಬಲಿ..!

May 30, 2026

ವ್ಯಕ್ತಿತ್ವ ಹಿತರಕ್ಷಣೆ ತಿದ್ದುಪಡಿ ಕಾಯಿದೆ ಇಂದಿನ ಡಿಜಿಟಲ್ ಯುಗದ ಅಗತ್ಯ

May 30, 2026

ಬಿಜೆಪಿಗೆ ಶಾಕ್: ಬೊಳಂತೂರಿನ ಹಿರಿಯ ನಾಯಕ ಈಶ್ವರ್ ಭಟ್ ರಾಕೋಡಿ ಕಾಂಗ್ರೆಸ್ ಸೇರ್ಪಡೆ

May 30, 2026
1 2 3 … 1,939 Next
Automatic YouTube Gallery

ಅಭಿವೃದ್ಧಿಯತ್ತ ಮಾಡೂರು ಶಾಲೆಯ ದಿಟ್ಟಹೆಜ್ಜೆ | ಸ್ವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ ಮಾಡೂರು ಶಾಲೆ| Ullalavani

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಭಿವೃದ್ಧಿಯತ್ತ ಮಾಡೂರು ಶಾಲೆಯ ದಿಟ್ಟಹೆಜ್ಜೆ | ಸ್ವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ ಮಾಡೂರು ಶಾಲೆ| Ullalavani
Now Playing
ಅಭಿವೃದ್ಧಿಯತ್ತ ಮಾಡೂರು ಶಾಲೆಯ ದಿಟ್ಟಹೆಜ್ಜೆ | ಸ್ವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ ಮಾಡೂರು ಶಾಲೆ| Ullalavani
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತೆ ಮಾಹಿತಿ ಶಿಬಿರ ಹಾಗೂ ನೊಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ
Now Playing
ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತೆ ಮಾಹಿತಿ ಶಿಬಿರ ಹಾಗೂ ನೊಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ
ತೊಕ್ಕೊಟ್ಟುವಿನಲ್ಲಿ ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತಾ ಮಾಹಿತಿ ಶಿಬಿರ, ...
ತೊಕ್ಕೊಟ್ಟುವಿನಲ್ಲಿ ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತಾ ಮಾಹಿತಿ ಶಿಬಿರ, ಕಾರ್ಮಿಕರ ನೋಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ; ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ

ಮ್ಯಾಕೊ ಸೊಸೈಟಿ ಕಾರ್ಯಕ್ಕೆ ಶ್ಲಾಘನೆ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version