Site icon Ullalavani

ಪಾಪ್ಯುಲರ್ ಫ್ರಂಟ್ ನಿಂದ ಸ್ಕಾಲರ್ ಶಿಪ್ ವಿತರಣೆ

UN NETWORKS

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಹಮ್ಮಿಕೊಡಿರುವ ನ್ಯಾಷನಲ್ ಸ್ಕಾಲರ್ ಶಿಪ್ 2018 ಅಭಿಯಾನದ ಅಂಗವಾಗಿ ಕರ್ನಾಟಕ ರಾಜ್ಯದ ವತಿಯಿಂದ ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣಾ ಕಾರ್ಯಕ್ರಮವು ಮಂಗಳೂರಿನ ಕಂಕನಾಡಿ ಜಮಿಯತುಲ್ ಫಲಾಹ್ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಒಟ್ಟು 248 ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಚೆಕ್ ವಿತರಿಸಲಾಯಿತು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಸಚೇತಕ ಐವನ್ ಡಿಸೋಜಾ, ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಸದಸ್ಯ ಅಬ್ದುಲ್ ರವೂಫ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅಯಾಜ್ ಕೃಷ್ಣಾಪುರ, ಕುದ್ರೋಳಿ ಜಾಮಿಯಾ ಮಸೀದಿ ಖತೀಬರಾದ ಮುಫ್ತಿ ಅಬ್ದುಲ್ ಮನ್ನಾನ್ ಸಾಬ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯರಾದ ಅನ್ವರ್ ಸಾದಾತ್, ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷರಾದ ನವಾಜ್ ಉಳ್ಳಾಲ, ವಾಮಂಜೂರ್ ಜುಮಾ ಮಸೀದಿ ಖತೀಬರಾದ ಅಬ್ದುಲ್ ಹಮೀದ್ ಫೈಜಿ, ಕ್ಯಾಂಪಸ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಶಾಕಿರ್, ಸುರತ್ಕಲ್ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ಅಜೀಜ್ ಮುಂತಾದವರು ಉಪಸ್ಥಿತರಿದ್ದರು.

Exit mobile version