UN NETWORKS
ಉಳ್ಳಾಲ: ಉಪ್ಪಳ ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮ, ಜಗದ್ಗುರು ಶ್ರೀ ನಿತ್ಯಾನಂದ ಮಹಾಪಪೀಠಮ್ ಇವರಿಂದ ಶ್ರೀ ಗಾಯತ್ರೀ ದೇವಿಯ ಹಾಗೂ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ಮತ್ತು ಲೋಕಕಲ್ಯಾಣಾರ್ಥವಾಗಿ ` ನಕ್ಷತ್ರೇಷ್ಟಿ’ ಯಾಗ ಫೆ.1 ರಿಂದ 4ರ ವರೆಗೆ ಹಾಗೂ 15 ನೇ ವರ್ಷದ ಅಖಂಡ ಭಜನಾ ಸಪ್ತಾಹ ಫೆ.4 ರಿಂದ ಫೆ.11ರವರೆಗೆ ಜರಗಲಿದೆ ಎಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಹೇಳಿದ್ದಾರೆ.
ಯಾಗದ ಪ್ರಯುಕ್ತ ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ದೇಶವ್ಯಾಪಿಯ ಗಣ್ಯರು ಭಾಗವಹಿಸಲಿದ್ದಾರೆ.
ಸಾಮಾಜಿಕ ಮುಂದಾಳು ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಸುದ್ಧಿಗೋಷ್ಠಿಯಲ್ಲಿ ಯಾಗ ಸಮಿತಿಯ ಅಧ್ಯಕ್ಷ ಡಾ| ಶ್ರೀಧರ್ ಭಟ್ ಉಪ್ಪಳ ಉಪಸ್ಥಿತರಿದ್ದರು.