UN NETWORKS
ಉಳ್ಳಾಲ: ಸರಕಳವು ನಡೆಸುತ್ತಿದ್ದ ಅಂತರಾಜ್ಯ ಕುಖ್ಯಾತಿ ಕಳ್ಳ ಕಾಸರಗೋಡಿನ ನಾಯಮ್ಮಾರಮೂಲೆಯ ಅಬ್ದುಲ್ ಹ್ಯಾರೀಸ್ (29) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಕೈಯಲ್ಲಿದ್ದ 20 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಚಿನ್ನದ ಸರದ ಅಂದಾಜು ಮೌಲ್ಯ ರೂ. 60,000 ಆಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.