UN NETWORKS
ಉಳ್ಳಾಲ : ರಾಜ್ಯದ ವಿವಿದೆಡೆಗಳಿಂದ ಆಗಮಿಸಿರುವ ಕುಸ್ತಿಪಟುಗಳು ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಮುಂದಿನ ದಿನಗಳಲ್ಲಿ ರಾಷ್ಟ್ರ ಆಂತರಾಷ್ಟ್ರೀಯ ಕುಸ್ತಿಪಟುಗಳಾಗಿ ರಾಜ್ಯಕ್ಕೆ ಹೆಸರು ತರುವ ಕಾರ್ಯ ಆಗಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ಬಿಎಂಎಸ್ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ ಕುಸ್ತಿ ಪಂದ್ಯಾಟದ ಸ್ಪರ್ಧೆಗೆ ಚಾಲನೆ ನೀಡಿದರು. ಉತಸ್ವ ಸಮಿತಿ ಉಸ್ತುವಾರಿ ದಿನಕರ ಉಳ್ಳಾಲ್ ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್ ಕುಂಇಮೋನು, ಸದಸ್ಯ ಬಾಝಿಲ್ ಡಿಸೋಜ, ಮುಖಂಡರಾದ ಸೀತಾರಾಮ ಬಂಗೇರ, ಆನಂದ ಅಸೈಗೋಳಿ, ತಾರನಾಥ್ ರೈ ,ದೇವಕಿ ಉಳ್ಳಾಲ್,ತೋನ್ಸೆ ಪುಷ್ಕಳ್ ಕುಮಾರ್, ತ್ಯಾಗಂ ಹರೇಕಳ, ಮೋಹನ್ ಶಿರ್ಲಾಲ್, ರಾಧಾಕೃಷ್ಣ ರೈ, ಅಬ್ದುಲ್ ಅಝೀಝ್ ಹಕ್, ಭಾಸ್ಕರ ರೈ ಕುಕ್ಕುವಳ್ಳಿ ಲಕ್ಷ್ಮೀನಾರಾಯಣ್ ಹರೇಕಳ ಮತ್ತಿತರರು ಉಪಸ್ಥಿತರಿದ್ದರು.