Site icon Ullalavani

ಕಿನ್ಯಾ:ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಲದ 48 ನೇ ವರ್ಷದ ಪಾರ್ಷಿಕೋತ್ಸವ

UN NETWORKS

ಕಿನ್ಯ: ದುರ್ಗಾಪುರ, ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಯುವಕ ಮಂಡಲದ 48ನೇ ವಾರ್ಷಿಕೋತ್ಸವವನ್ನು ಕೋಟೆಕಾರ್ ನೆಲ್ಲಿಸ್ಥಳ ಶ್ರೀ ಕಾಳಿಕಾಂಭ ದೇವಸ್ಥಾನದ ಅಧ್ಯಕ್ಷ ಸುಂದರ್ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿ, ನಿರಂತರ ಯಕ್ಷಗಾನ ಚಟುವಟಿಕೆಯೊಂದಿಗೆ, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಯಕ್ಷಗಾನ ಸಂಘ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು.

ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ, ಕೋಟೆಕಾರ್ ಕೆಳಗಿನಗುತ್ತು, ನಿವೃತ್ತ ಸರಕಾರಿ ಅಧಿಕಾರಿ, ತಲಪಾಡಿ ಬಿಲ್ಲವ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಾಜೀವ ದೇವಾಡಿಗ, ಕಿನ್ಯ ಬೆಳರಿಂಗೆ ಭಂಡಾರಮನೆ ಶ್ರೀ ಮಲರಾಯ ದೈವದ ಪಾತ್ರಿ ಮೈಂದ ಪೂಜಾರಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಸ್ಪರ್ದಾ ವಿಜೇತರಿಗೆ ಬಹುಮಾನ ವಿತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವಾಧ್ಯಕ್ಷ ಟಿ. ರಾಮಯ್ಯ ಕಿಲ್ಲೆ, ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಯಕ್ಷಗಾನ ಸಂಘದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯಎಂದು ವಿನಂತಿಸಿದರು.

ಸಂಘದ ಅಧ್ಯಕ್ಶರಾಗಿ ಸೇವೆ ಸಲ್ಲಿಸಿದ ಹಿರಿಯ ಸದಸ್ಯರು, ಜನಾರ್ದನ ಪಕ್ಕಳ, ದೇವಿಪುರ ತಲಪಾಡಿ ಹರಿಶ್ಚಂದ್ರ ಅಚಾರ್ಯ, ಕಿನ್ಯ ಪಾದೆ ದಂಪತಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯಕ್ಷಗಾನ ತರಭೇತಿ ನೀಡಿದ ನಾಟ್ಯಗುರು ರಕ್ಷಿತ್ ಶೆಟ್ಟಿ ಪಡ್ರೆ, ಇವರನ್ನು ಅಭಿನಂದಿಸಲಾಯಿತು.

ಜಾಹೀರಾತು

ಸಂಘದ ಅಧ್ಯಕ್ಷ ರಾಮ ಕನಕಮುಗೇರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವ ಪ್ರಸಂಗ ಕರ್ತೃ ರಮೇಶ್ ಆಳ್ವ ದೇವಿಪುರ ಪ್ರಾರ್ಥನೆಗೈದರು. ಸಂಚಾಲಕ ಬಾಬು ಶ್ರೀ ಶಾಸ್ತಾ ಕಿನ್ಯ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಕಿನ್ಯ ವಾರ್ಷಿಕ ವರದಿ ಮಂಡಿಸಿದರು. ಕ್ರೀಡಾ ಕಾರ್ಯದರ್ಶಿ ಸುಕೃತ್ ಬಹುಮಾನ ವರದಿ ವಾಚಿಸಿದರು. ಮಾಜಿ ಕಾರ್ಯದರ್ಶಿ ರಾಜೇಂದ್ರ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಪೊಸಕುರಲ್ ನಿರ್ದೇಶಕ, ಹಿರಿಯ ಸದಸ್ಯ ವಿದ್ಯಾಧರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Exit mobile version