UN NETWORKS
ಇರಾ : ಇರಾ ಗ್ರಾಮದ ಹಿಂದು ಭಾಂದವರ ಬಹುಕಾಲದ ಬೇಡಿಕೆಯಾಗಿದ್ದು ಗ್ರಾಮಕ್ಕೊಂದು ಸುಸಜ್ಜಿತ ಸ್ಮಶಾನ ನಿರ್ಮಾಣದ ಕಲ್ಪನೆಯಂತೆ ಇರಾ ಸೈಟ್ ಎಂಬಲ್ಲಿ ಈಗಾಗಲೇ 3 ತಿಂಗಳ ಹಿಂದೆ ಅಧಿಕೃತವಾಗಿ ಸರಕಾರದಿಂದ ಹಿಂದು ರುದ್ರಭೂಮಿಗಾಗಿ ಮಂಜೂರುಗೊಂಡ ಜಮೀನಿನಲ್ಲಿ ಗ್ರಾಮ ಪಂಚಾಯತ್ ಮುಖಾಂತರ ನಿರ್ಮಾಣಗೊಳ್ಳಲಿರುವ ಹಿಂದು ರುದ್ರಭೂಮಿ ಕಾಮಗಾರಿಗೆ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕ ಸಚಿವರಾದ ಯು.ಟಿ.ಖಾದರವರ ಶಿಫಾರಸ್ಸಿನ ಮೇರೆಗೆ ಮಂಜೂರುಗೊಂಡ 4ಲಕ್ಷ ರೂಪಾಯಿ ಅನುದಾನದ ಆದೇಶ ಪತ್ರವನ್ನು ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಶಶಿಕಾಂತ್ ಸೆಂಥಿಲ್ ರವರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಯವರಿಗೆ ಹಸ್ತಾಂತರಿಸಿದರು.
ಗ್ರಾಮದ ಬಹುಕಾಲದ ಬೇಡಿಕೆಯನ್ನು ಈಡೇರಿಸುವಲ್ಲಿ ಅವಿರತ ಶ್ರಮ ಪಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಗಟ್ಟಿ ಹಾಗೂ ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಸದಸ್ಯರಾದ ಗೋಪಾಲ ಅಶ್ವತ್ಥಡಿ, ರಮೇಶ್ ಪೂಜಾರಿ, ಸೀತಾ, ಹಾಗೂ ಪಂಚಾಯತ್ ಸದಸ್ಯರನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ.