UN NETWORKS
ಉಳ್ಳಾಲ: ಸಿದ್ಧರಾಮಯ್ಯ ನೇತೃತ್ವದ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿ, ಯೋಜನೆಯಲ್ಲಿ ಜಾತಿ ತಾರತಮ್ಯ, ಹಿಂದೂ ವಿರೋಧಿ ನೀತಿಗಳು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಜನ ತಿರಸ್ಕರಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸಮಾವೇಶದ ಅಧ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಉಮಾನಾಥ ಕೋಟ್ಯಾನ್, ಜಿಲ್ಲಾ ಉಪಾಧ್ಯಕ್ಷರಾದ ರಾಮಚಂದ್ರ ಬೈಕಂಪಾಡಿ, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ನಿತಿನ್ ಕುಮಾರ್, ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ನಮಿತಾ ಶ್ಯಾಂ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನರಾಜ್ ಕೆ.ಆರ್, ಮನೋಜ್ ಆಚಾರ್ಯ ಉಪಸ್ಥಿತರಿದ್ದರು.