UN NETWORKS
ಉಳ್ಳಾಲ: ಸಾಮಾಜಿಕ ಚಟುವಟಿಕೆ ಸಾಂಘಿಕವಾಗಿ ನಡೆಸಿದಾಗ ಯಶಸ್ವಿಯಾಗಲು ಸಾಧ್ಯ. ಇಂತಹ ಕಾರ್ಯದಲ್ಲಿ ಎಲ್ಲರ ಸಲಹೆ ಸಹಕಾರವಿದ್ದರೆ ಸಾಮಾಜಿಕ ಚಟುವಟಿಕೆಗಳಿಗೆ ಇನ್ನಷ್ಟು ಬಲ ಬರುತ್ತದೆ ಎಂದು ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಎ ಉಚ್ಚಿಲ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷರು, ಸಂಸ್ಥೆಯ ನಿರ್ದೇಶಕ ರೋಹಿತ್ ಸ್ಯಾಂಕ್ಟಸ್ ಮಾತನಾಡಿ, ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ವಿಸ್ತಾರದ ಕುರಿತು ತಿಳಿಸಿದರು. ಸೇವೆ ಮಾಡುವವರು ಪ್ರಚಾರ ಬಯಸಬಾರದು, ಆದರೆ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಸಮಾಜಕ್ಕೆ ಅರಿವಿರುವುದು ಅಗತ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ರೋಶನಿ ನಿಲಯದ ಸಮಾಜಕಾರ್ಯ ವಿಭಾಗ ಮುಖ್ಯಸ್ಥೆ ಮೀನಾ ಮಾಂತೆರೋ ಪಶ್ಚಿಮ ಸಂಸ್ಥೆಯ ಕೈಪಿಡಿ ಬಿಡುಗಡೆಗೊಳಿಸಿದರು. ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಬಿ.ಎಸ್.ಡಬ್ಲೂ ಪದವಿಯಲ್ಲಿ ಪ್ರಥಮ ರ್ಯಾಂಕ್ಗಳಿಸಿದ ಕೃಪಾ ಕೈಲಾರ್ರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಪ್ಪಿನಂಗಡಿ ವಲಯ ಅಧ್ಯಕ್ಷ ಕೈಲಾರ್ ರಾಜಗೋಪಾಲ ಭಟ್, ಪಶ್ಚಿಮ ಸಿಬ್ಬಂದಿ ವರ್ಗ ಹಾಗೂ ನಿವಾಸಿಗಳು ರೋಶನಿ ನಿಲಯ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಬಿಬಿನಾ ಸ್ವಾಗತಿಸಿ, ಹರ್ಷಿತ್ ವಂದಿಸಿದರು. ಸುವರ್ಚಲಾ ಕಾರ್ಯಕ್ರಮ ನಿರೂಪಿಸಿದರು.