UN NETWORKS
ಉಳ್ಳಾಲ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು( ಮಾ.20) ಸಂಜೆ 7.00ಕ್ಕೆ ಉಳ್ಳಾಲದ ಇತಿಹಾಸ ಪ್ರಸಿದ್ಧ ಸೈಯ್ಯದ್ ಮದನಿ ದರ್ಗಾ ಭೇಟಿ ನೀಡಲಿದ್ದು, ನಡುವೆ ಅಬ್ಬಕ್ಕ ಪ್ರತಿಮೆಗೆ ಹೂಹಾರ ಹಾಕಿ ತೊಕ್ಕೊಟ್ಟು ಕಲ್ಲಾಪು ವಿನಿಂದ ರೋಡ್ ಷೋ ನಲ್ಲಿ ಭಾಗವಹಿಸಲಿದ್ದಾರೆ.
ಅಲ್ಲಿಂದ ಉಳ್ಳಾಲ ಸೈಯ್ಯದ್ ಮದನಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ. ದರ್ಗಾ ವಠಾರದಲ್ಲಿ ಸಜ್ಜುಗೊಳಿಸಲಾಗಿರುವ ವೇದಿಕೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.