UN NETWORKS
ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯರಾಗಿ ಬಾದುಶಾ ಸಾಂಬಾರ್ತೋಟ ನೇಮಕಗೊಂಡಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಚಟುವಟಿಕೆ, ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅವರು, ಜೆಸಿಐ ಮಂಗಳ ಗಂಗೋತ್ರಿ ಅಧ್ಯಕ್ಷರಾಗಿ, ಅಬ್ಬಕ್ಕ ಉತ್ಸವ ಸಮಿತಿ ಪದಾಧಿಕಾರಿಯಾಗಿ, ಸೌಹಾರ್ದ ಯೂತ್ಕ್ಲಬ್ ಸ್ಥಾಪಕಾಧ್ಯಕ್ಷರಾಗಿ ಹಲವು ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಾಮಾಜ ಸೇವೆಯಲ್ಲಿ ನಿರತರಾಗಿದ್ದಾರೆ.


