Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಪರಾಧ ಸುದ್ದಿಗಳು

ಕಲ್ಲಡ್ಕ ಪ್ರಭಾಕರ್ ವಿರುದ್ಧ ಪ್ರಕರಣ ದಾಖಲು

UllalaVaniBy UllalaVaniApril 9, 2018No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೈರಂಗಳ : ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದಲ್ಲಿ ಆಮರಣಾಂತ ಉಪವಾಸಕ್ಕೆ ಭೇಟಿ ನೀಡಿದ್ದ ಕಲ್ಲಡ್ಕ ಭಟ್ ಅವರು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಧರ್ಮ ವಿರೋಧಿ ಭಾಷಣ ಮಾಡಿರುವುದರ ವಿರುದ್ಧ ಚುನಾವಣಾ ಆಯೋಗ ಮಾಹಿತಿ ಸಂಗ್ರಹಿಸಿ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದೆ.

ಎರಡು ದಿನಗಳ ಕಾಲ ಆಮರಣಾಂತ ಉಪವಾಸದಲ್ಲಿ ಭಾಗಿಯಾಗಿದ್ದ ಸಂದರ್ಭ ಭಟ್ ಅವರು `ದನದ ಮಾಂಸ ತಿನ್ನುವ ಸಚಿವರನ್ನು ದೇವಸ್ಥಾನದೊಳಕ್ಕೆ ಬಿಡಬಾರದು. ಗೋ ದರೋಡೆಗೆ ಕ್ರಮಕೈಗೊಳ್ಳದೆ ಪ್ರೋತ್ಸಾಹಿಸುವಂತಹ ಸರಕಾರದ ಮತ್ತು ಭಾಗದ ಶಾಸಕರ ಬದಲಾವಣೆಯಾಗಬೇಕಿದೆ ಅಂದಿದ್ದರು. ಮರುದಿನ ಅಲ್ಲೇ ಖಾಸಗಿ ಜಾಗದಲ್ಲಿ ಮಾತನಾಡಲು ಅವಾಶವಿದೆ ಎಂದು ಅನ್ನುತ್ತಾ ನೀತಿ ಸಂಹಿತೆಯ ವಿರುದ್ಧ ನಿಂದನಾತ್ಮಕ ಹೇಳಿಕೆಯನ್ನು ನೀಡಿದ್ದರು. ಇದರಿಂದ ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ಮತ್ತು ಅನುಮಾನ ಹುಟ್ಟಿಸುವಂತೆ ಭಟ್ ಅವರ ಭಾಷಣ ಪ್ರೇರೇಪಿಸಿದೆ ಎಂದು ಚುನಾವಣಾ ಆಯೋಗ ಆರೋಪಿಸಿತ್ತು.

ಅದರಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಐಪಿಸಿ 153 (ಎ) ಮತ್ತು ಆರ್ ಪಿ ಕಾಯ್ದೆ 125ರ ಅಡಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪವಾಸ ನಿರತ ಗ್ರಾಮ ಪಂಚಾಯತ್ ಸದಸ್ಯನ ಮನೆಗೆ ಹಾನಿ
ಆಮರಣಾಂತ ಉಪವಾಸ ನಡೆಸುತ್ತಿದ್ದ ಟಿ.ಜಿ.ರಾಜಾರಾಂ ಭಟ್ ಆಸ್ಪತ್ರೆಗೆ ದಾಖಲಾದ ಬಳಿಕ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ನಾಯಕ ಉಪವಾಸದ ನೇತೃತ್ವ ವಹಿಸಿಕೊಂಡಿದ್ದರು. ಶನಿವಾರ ತಡರಾತ್ರಿ ದುಷ್ಕರ್ಮಿಗಳು ಅವರ ಮನೆಯ ಹೊರಆವರಣಕ್ಕೆ ದುಷ್ಕರ್ಮಿಗಳು ನುಗ್ಗಿ ಹಾನಿಗೈದಿದ್ದಾರೆ.

ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ನಾಯಕ ಕೈರಂಗಳದ ಬೀರೂರಿನ ನಂದರಾಜ ಶೆಟ್ಟಿ ಎಂಬವರ ಮನೆಯ ಸಿಟ್‍ಔಟ್‍ನಲ್ಲಿದ್ದ ಡ್ರಾವರ್ ಪುಡಿಗೈದಿದ್ದಾರೆ. ಅಲ್ಲದೆ ಅದರಲ್ಲಿದ್ದ ನಂದರಾಜ ಅವರ ವೈಯಕ್ತಿಕ ಡೈರಿಯೊಂದನ್ನು ಹಾನಿಗೈದಿದ್ದಾರೆ ಎನ್ನಲಾಗಿದೆ. ಅಲ್ಲದೆ ಮನೆಯ ಬಾಗಿಲಿಗೆ ಹಲವು ಬಾರಿ ಬಡಿದು ವಿಕೃತ ರೀತಿಯಲ್ಲಿ ವರ್ತಿಸಿದ್ದಾರೆ. ಅದೂ ಅಲ್ಲದೆ ಪಿಎ ಎಂಜಿನಿನಿಯರಿಂಗ್ ಕಾಲೇಜಿನ ಎದುರುಗಡೆ ನಂದರಾಜ್ ಅವರಿಗೆ ಸೇರಿದ ಲಾಡ್ಜ್ ಇದ್ದು, ಅದರ ಎದುರುಗಡೆ ಬೀರ್ ಬಾಟಲಿ ಒಡೆದು ಹಾಕಿದ್ದಾರೆ. ಘಟನೆಯ ಬಗ್ಗೆ ನಂದರಾಜ್ ಅವರು ಈಗಾಗಲೇ ಕೊಣಾಜೆ ಪೊಲೀಸ್ ಠಾಣೆಗೆ ಮೌಖಿಕ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ನಂದರಾಜ್ ಅವರು ಕೊಣಾಜೆ ಠಾಣೆಗೆ ತೆರಳಿ ಅಧಿಕೃತವಾಗಿ ದೂರು ನೀಡಲಿದ್ದಾರೆ. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮೃತಧಾರಾ ಗೋಶಾಲೆಯಿಂದ ಇತ್ತೀಚಿಗೆ ಗೋಕಳವು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗೋಶಾಲೆಯ ಮಾಲಕ ರಾಜಾರಾಂ ಭಟ್ ಅವರು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ನಂದರಾಜ್ ಶೆಟ್ಟಿ ಕೂಡ ಸ್ಥಳದಲ್ಲಿದ್ದು, ಅವರಿಗೆ ನೈತಿಕ ಬೆಂಬಲ ನೀಡಿದ್ದರು. ಇದೇ ದ್ವೇಷದ ಹಿನ್ನೆಲೆಯಲ್ಲಿ ಮನೆಗೆ ಹಾನಿ ಮಾಡಲಾಗಿದೆ ಎಂಬ ಮಾತು ಸ್ಥಳೀಯರಿಂದ ಕೇಳಿ ಬರುತ್ತಿದೆ.

ಅಸ್ಪತ್ರೆಗೆ ದಾಖಲಾದ ಟಿ.ಜಿ. ರಾಜಾರಾಂ ಭಟ್
ಕೈರಂಗಳ ಗ್ರಾಮದ ಪುಣ್ಯಕೋಟಿನಗರದ ಅಮೃತಧಾರ ಗೋಶಾಲೆಯಿಂದ ದನ ಕಳವು ಪ್ರಕರಣದ ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿ ಕಳೆದ ಒಂದು ವಾರದಿಂದ ಉಪವಾಸ ಸತ್ಯಾಗ್ರಹದಲ್ಲಿದ್ದ ಗೋಶಾಲೆಯ ಮುಖ್ಯಸ್ಥ ಟಿ.ಜಿ.ರಾಜಾರಾಮ ಭಟ್ ಅವರು ಅಸ್ವಸ್ಥಗೊಂಡಿದ್ದು, ಅವರನ್ನು ಪೊಲೀಸರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗೋ ಕಳ್ಳರ ಬಂಧನಕ್ಕಾಗಿ ಪುಣ್ಯಕೋಟಿನಗರದ ಗೋಶಾಲೆಯಲ್ಲಿ ಟಿ.ಜಿ.ರಾಜಾರಾಮ ಭಟ್ ಅವರು ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದರು. ಸತ್ಯಾಗ್ರಹಕ್ಕೆ ಹಲವಾರು ಪ್ರಮುಖರು ಬಂದು ಬೆಂಬಲ ವ್ಯಕ್ತಪಡಿಸಿ, ಪ್ರತಿ ದಿನವೂ ಅಪಾರಸ ಸಂಖ್ಯೆಯಲ್ಲಿ ಜನರು ಸತ್ಯಾಗ್ರಹ ಸ್ಥಳದಲ್ಲಿ ಜಮಾಯಿಸಿ ಗೋ ಕಳ್ಳರ ಬಂಧನಕ್ಕಾಗಿ ಆಗ್ರಹಿಸುತ್ತಿದ್ದರು.
ಶನಿವಾರದಂದು ತಡರಾತ್ರಿ ಟಿ.ಜಿ. ರಾಜರಾಮ ಭಟ್ ಅವರ ಆರೋಗ್ಯದಲ್ಲಿ ವೈಪರಿತ್ಯ ಉಂಟಾಗಿತ್ತು. ಬಳಿಕ ಪೊಲೀಸರು ಅವರ ಜೊತೆಗೆ ಮಾತುಕತೆ ನಡೆಸಿ ಅವರನ್ನು ಕೂಡಲೇ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಯಲ್ಲೂ ಮುಂದುವರಿದ ನಿರಶನ
ಆಸ್ಪತ್ರೆಗೆ ದಾಖಲಾಗಿರುವ ರಾಜಾರಾಮ ಭಟ್ ಅವರು ಅಸ್ಪತ್ರೆಯಲ್ಲಿಯೂ ಕೂಡಾ ಗೋ ಕಳ್ಳರ ಬಂಧನಕ್ಕಾಗಿ ಆಗ್ರಹಿಸಿ ಏನೂ ಆಹಾರವನ್ನು ಸೇವಿಸದೆ ಉಪವಾಸ ಮುಂದುವರಿಸಿದ್ದಾರೆ. ಶನಿವಾರ ತಡರಾತ್ರಿ ನಿರಶನ ಸ್ಥಳಕ್ಕೆ ಬಂದ ಪೊಲೀಸರು ಬಲತ್ಕಾರವಾಗಿ ತನ್ನನ್ನು ಆಸ್ಪತ್ರೆಗೆ ಸೇರಿಸಿರುವುದಾಗಿ ರಾಜಾರಾಮ ಭಟ್ ಅವರು ಆರೋಪಿಸಿದ್ದಾರೆ. ವೈದ್ಯಕೀಯ ತಪಾಸಣೆ ನಡೆದ ಬಳಿಕ ಪೊಲೀಸರು ತಂದಿದ್ದ ಅಂಬ್ಯುಲೆನ್ಸ್‍ನಲ್ಲಿ ಕುಳಿತುಕೊಳ್ಳಲು ಹೇಳಿದಾಗ ಅದನ್ನು ನಿರಾಕರಿಸಿದ ರಾಜಾರಾಮ ಭಟ್ ಅವರು ತನ್ನದೇ ಕಾರಲ್ಲಿಯೇ ಪೊಲೀಸರೊಂದಿಗೆ ತೆರಳಿದ್ದು ಬಳಿಕ ಪೊಲೀಸರು ದೇರಳಕಟ್ಟೆಯ ಕೆ.ಹೆಗ್ಡೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಯಲ್ಲಿರುವ ರಾಜಾರಾಮ ಭಟ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ಪ್ರಮುಖರು ಭಾನುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ರಾಜಾರಾಮ್ ಭಟ್ ಆಸ್ಪತ್ರೆಯಲ್ಲಿದ್ದರೂ ಗೋಶಾಲೆಯಲ್ಲಿ ಮುಂದುವರಿದ ಸತ್ಯಾಗ್ರಹ
ರಾಜರಾಮ ಭಟ್ ಅವರ ಅನಾರೋಗ್ಯದಿಂದ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಭಟ್ ಅವರ ಆಶಯದಂತೆ ಗೋಶಾಲೆಯಲ್ಲಿ ಅವರ ಬೆಂಬಲಿಗರು ಉಪವಾಸ ಸತ್ಯಾಗ್ರಹ ವನ್ನು ಮುಂದುರಿಸಿದ್ದಾರೆ. ಭಾನುವಾರವೂ ಸುಮಾರು 40 ರಷ್ಟು ಜನ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ. ಅಲ್ಲದೆ ಭಾನುವಾರ ಸಂಜೆ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಮುಖಂಡರಾದ ಪುಂಡರೀಕಾಕ್ಷ, ನಂದರಾಜ ಶೆಟ್ಟಿ ಸೇರಿದಂತೆ ಸನಾತನ ಸಂಸ್ಕಾರ ಭಾರತಿಯ ಕಲಾವಿದರು ಕೂಡಾ ಭಾಗವಹಿಸಿದ್ದರು. ಸಂಜೆ ನಡೆದ ಗೋಪೂಜೆಯಲ್ಲೂ ಅಪಾರಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.

ಯಾವುದೇ ಕಾರಣಕ್ಕೂ ಸತ್ಯಾಗ್ರಹ ಕೈಬಿಡೆವು: ಸಂತೋಷ್ ಬೋಳಿಯಾರ್
ಗೋ ಹಂತಕರನ್ನು ಬಂಧಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಕೈರಂಗಳ ಗೋಶಾಲೆಯಲ್ಲಿ ರಾಜಾರಾಮ ಭಟ್ ಅವರ ನೇತೃತ್ವದಲ್ಲಿ ಆಮರಣಾಂತ ಉಪವಾಸ ನಡೆಯುತ್ತಿದ್ದು ಎಲ್ಲರೂ ಜಾತಿ ಬೇಧ ಮರೆತು ಹೋರಾಟಕ್ಕೆ ಕೈ ಜೋಡಿಸಿದ್ದಾರೆ, ಆದರೆ ಪೊಲೀಸರು ಶನಿವಾರ ತಡರಾತ್ರಿ ಬಂದು ರಾಜಾರಾಮ ಭಟ್ ಅವರನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಸತ್ಯಾಗ್ರಹವನ್ನು ಕೈಬಿಡದೆ ಭಟ್ ಅವರ ಆಶಯದಂತೆ ನ್ಯಾಯ ಸಿಗುವವರೆಗೂ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತೇವೆ.
ಸಂತೋಷ್ ಕುಮಾರ್ ಬೋಳಿಯಾರ್
ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

March 23, 2026

ಮಂಗಳೂರು CCB ಪೊಲೀಸರ ಕಾರ್ಯಾಚರಣೆ — ತೊಕ್ಕೊಟ್ಟು ಮೂಲದ ಇಬ್ಬರು ಸೇರಿದಂತೆ 3 ಮಂದಿ ಅರೆಸ್ಟ್

March 23, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

By UllalaVaniMarch 24, 20260

ಮಂಗಳೂರು, ಮಾ.24: ಪ್ರವಾಸಿ ವಾಹನಗಳಲ್ಲಿ ಕಡ್ಡಾಯಗೊಳಿಸಿರುವ ಪ್ಯಾನಿಕ್ ಬಟನ್ ಅಳವಡಿಕೆ ಕುರಿತು ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರಿಂದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮ

March 24, 2026

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ 5 ಲಕ್ಷ ಮೌಲ್ಯದ ಗಾಂಜಾ ವಶ..!!

March 24, 2026
1 2 3 … 1,845 Next
Automatic YouTube Gallery

|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ

ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ಕ್ರಮಕ್ಕೆ ಆಗ್ರಹ

ಈಗಾಗಲೇ 5 ಅಪಘಾತಗಳು ಸಂಭವಿಸಿದೆ; ಅರುಣ್ ಡಿ'ಸೋಜ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ
Now Playing
|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ
ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ...
ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ಕ್ರಮಕ್ಕೆ ಆಗ್ರಹ

ಈಗಾಗಲೇ 5 ಅಪಘಾತಗಳು ಸಂಭವಿಸಿದೆ; ಅರುಣ್ ಡಿ'ಸೋಜ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ
Now Playing
ಮೇ.8ರಂದು ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ
ಶ್ರೀ ಆದಿ ಬ್ರಹ್ಮ ಮೋಗೆರ ಕಳ ನಾರ್ಯದಲ್ಲಿ ಮೇ.8ರಂದು ಬ್ರಹ್ಮಕಲಶೋತ್ಸವ ; ...
ಶ್ರೀ ಆದಿ ಬ್ರಹ್ಮ ಮೋಗೆರ ಕಳ ನಾರ್ಯದಲ್ಲಿ ಮೇ.8ರಂದು ಬ್ರಹ್ಮಕಲಶೋತ್ಸವ ; ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಸಭೆ

ಧಾರ್ಮಿಕ ಕಾರ್ಯಗಳಲ್ಲಿ ರಾಜಕೀಯ ಬೇಡ: ಜಗದೀಶ್ ಆಳ್ವ ಕುವೆತ್ತಬೈಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d