UN NETWORKS
ಉಳ್ಳಾಲ: ರೈತಬಂಧು ಯಡಿಯೂರಪ್ಪ ನೇತೃತ್ವದ ಸರಕಾರದ ಅವಧಿಯಲ್ಲಿ ಉತ್ತಮ ಯೋಜನೆಗಳು ಜಾರಿಗೊಳಿಸುವುದರೊಂದಿಗೆ ಅನುಷ್ಠಾನವೂ ಆಗಿತ್ತು. ಇದರ ಸ್ಮರಣೆಯೊಂದಿಗೆ ರೈತರ ಹಿತ ಕಾಪಾಡುವ ಸಲುವಾಗಿ ರೈತ ಮೋರ್ಚಾದಿಂದ ಮುಷ್ಟಿ ಅಕ್ಕಿ ಅಭಿಯಾನ ಮಂಗಳೂರು ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯೆ ಹಾಗೂ ನಟಿ ತಾರಾ ಅನುರಾಧ ಹೇಳಿದರು.
ರೂ. 8,000 ಕೋಟಿ 2,000 ಕೋಟಿ ಘೋಷಣೆಗಳು ಮಾತ್ರ ಈಗಿನ ರಾಜ್ಯ ಸರಕಾರ ಮಾಡುವ ಮೂಲಕ ಘೋಷಣೆಗಳು, ಭಾಗ್ಯಗಳಿಗೆ ಮಾತ್ರ ಸೀಮಿತವಾಗಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ರೈತರನನು ಪ್ರೋತ್ಸಾಹಿಸುವ ಸಲುವಾಗಿ ರೈತಗೀತೆಗೆ ನಾಡಗೀತೆಯಷ್ಟೇ
ಪ್ರಾಮುಖ್ಯೆತಯನ್ನು ನೀಡಿತ್ತು. ಪ್ರಸ್ತುತ ಐದು ವರ್ಷಗಳಲ್ಲಿ 3,000 ರೈತರ ಆತ್ಮಹತ್ಯೆ ನಡೆದಿವೆ. ಇದಕ್ಕೆ ಕೊನೆಗಾಣಿಸಬೇಕಿರುವುದು ರಾಜ್ಯ ಸರಕಾರದ ಕರ್ತವ್ಯವಾಗಿತ್ತು. ಆದರೆ ಸಿನಿಮಾದಲ್ಲಿ ನಟನೆ ಮಾಡಿ ಮತ್ತೆ ಉತ್ತಮವವಾಗಿ ನಟಿಸಲಿ ಅನ್ನುವ ಕಾರಣಕ್ಕೆ ನಗದು ಪುರಸ್ಕಾರವನ್ನು ನೀಡಿ ಗೌರವಿಸುತ್ತಾರೆ. ಆದರೆ ಆತ್ಮಹತ್ಯೆ ನಡೆಸಿದ ರೈತರಿಗೆ ಲಕ್ಷಾಂತರ ಪರಿಹಾರ ಧನ ನೀಡಿ ಇನ್ನಷ್ಟು ರೈತರು ಸಾಯಲಿ ಅನ್ನುವ ದೃಷ್ಟಿಯಿಂದ ರಾಜ್ಯ ಸರಕಾರ ಪ್ರೋತ್ಸಾಹಿಸುತ್ತಿರುವ ಅನುಮಾನ ವ್ಯಕ್ತವಾಗುತ್ತಿದೆ . ರಾಜ್ಯ ಸರಕಾರ ಅನಾಚಾರಗಳು, ಭ್ರಷ್ಟಾಚಾರಗಳಿಂದ ಕೂಡಿದೆ. ಟಿ.ಜಿ.ರಾಜಾರಾಂ ಭಟ್ ಅವರು ಗೋವುಗಳ ಮೇಲಾದ ಅನ್ಯಾಯದ ವಿರುದ್ಧ ಒಂಭತ್ತು ದಿನಗಳ ಆಮರಣಾಂತ ಉಪವಾಸ ಕೈಗೊಳ್ಳಬೇಕಾಯಿತು. ಆದರೂ ನೈಜ ಆರೋಪಿಗಳನ್ನು ಹಿಡಿದಿರುವುದು ಅನುಮಾನಾಸ್ಪದವಾಗಿದೆ. ಗೋ ದರೋಡೆಕೋರರ ಜತೆಗೆ ಸರಕಾರ ಇದೆ ಅನ್ನುವುದು ಬಹಳ ಖೇದಕರ ಎಂದರು.
ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಪೂಜಾ ಪೈ, ಆಶಾ ಜಗದೀಶ್, ಬಿಜೆಪಿ ರೈತಮೋರ್ಚಾ ಜಿಲ್ಲಾ ಸಮಿತಿ ಅಧ್ಯಕ್ಷ ರಾಜೀವ ಭಂಡಾರಿ, ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಜಿ.ಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ರಾಜ್ಯ ಸಮಿತಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮುಖಂಡರಾದ ರಣ್ದೀಪ್ ಕಾಂಚನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ , ಜಿಲ್ಲಾ ಕಾರ್ಯದರ್ಶಿ ನಮಿತಾ ಶ್ಯಾಂ, ಟಿ.ಜಿ.ರಾಜಾರಾಮ ಭಟ್, ಜಗದೀಶ್ ಆಳ್ವ ಕುವೆತ್ತಬೈಲು, ಕ್ಷೇತ್ರ ಕಾರ್ಯದರ್ಶಿ ಹೇಮಂತ್ ಶೆಟ್ಟಿ, ರಾಮಕೃಷ್ಣ ಪಟ್ಟೋರಿ , ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರಶಾಂತ್ ಗಟ್ಟಿ, ಪ್ರೇಮಾನಂದ ರೈ, ಜೀವನ್ ಕುಮಾರ್ ತೊಕ್ಕೊಟ್ಟು, ಅಶ್ರಫ್ ಹರೇಕಳ,ಡಾ| ಮುನೀರ್ ಬಾವಾ, ಗೋಪಿನಾಥ್ ಬಗಂಬಿಲ, ಲೋಹಿತ್ ಗಟ್ಟಿ, ರಾಜೀವಿ ಕೆಂಪುಮಣ್ಣು, ಉಪಸ್ಥಿತರಿದ್ದರು.
https://youtu.be/bDgB8yKRb6M