UN NETWORKS
ತಲಪಾಡಿ: ಶಿಬಿರಗಳಲ್ಲಿ ಸಿಗುವ ಸಂಸ್ಕಾರ, ಸಾಮಾನ್ಯ ಜ್ಞಾನವು ಮುಂದೆ ಮಕ್ಕಳಲ್ಲಿ ಬೆಳವಣಿಗೆಯಲ್ಲಿ ಅದು ದೊಡ್ಡ ರೂಪದಲ್ಲಿ ವೃದ್ಧಿಯಾಗಲಿ ಎಂದು ಆನಂದಾಶ್ರಮ ಪ್ರೌಢಶಾಲಾ ನಿವೃತ್ತ ಅಧ್ಯಾಪಕರಾದ ಕೆ. ಆರ್.ಚಂದ್ರ ಅವರು ಅಭಿಪ್ರಾಯಪಟ್ಟರು.
ವೇದಮೂರ್ತಿ ಬಾಲಕೃಷ್ಣ ಭಟ್ ಪಂಜಾಳ ಶಿಬಿರ ಉದ್ಘಾಟಿಸಿ ಮಾತನಾಡಿ ಕೇವಲ ಹಣದಿಂದ ದೊರಕುವ ವಿಚಾರ, ವಿಷಯಗಳು ಮಾತ್ರ ಮುಖ್ಯವಲ್ಲ ಉಚಿತವಾಗಿ ಸಿಗುವ ಈ ಸಂಸ್ಕಾರಯುತ ಶಿಕ್ಷಣವನ್ನು ಮಕ್ಕಳು ಪಡೆದು ಅದನ್ನು ಪೋಷಿಸಿದರೆ ಮಕ್ಕಳ ಭವಿಷ್ಯ ಉಜ್ವಲವಾಗುವುದು ಎಂದರು.
ನಿವೃತ್ತ ಕೃಷಿ ಅಧಿಕಾರಿ ಕೇಶವ ತಚ್ಚಣಿ ಮಾತಾನಾಡಿ ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳು ತಮ್ಮತನವನ್ನು ಕಳೆದುಕೊಳ್ಳುತ್ತಿದ್ದು, ಇಂತಹ ಶಿಬಿರಗಳಿಂದ ಸಂಸ್ಕಾರ ಉತ್ತಮ ಜ್ಞಾನ ಪಡೆಯಲು ಸಾಧ್ಯ. ಮಕ್ಕಳು ಸೂರ್ಯೋದಯಕ್ಕಿಂತ ಮೊದಲು ಎದ್ದು ಪ್ರಶಾಂತ ವಾತಾವರಣದಲ್ಲಿ ಓದಬೇಕು. ಮನೆಯಲ್ಲಿ ತಮ್ಮ ತಮ್ಮ ಸ್ಥಳಗಳಲ್ಲಿ ಸೊಲ್ಪ ಮಟ್ಟಿಗೆ ಕೃಷಿಯನ್ನು ತರಕಾರಿಯನ್ನು ಮಾಡಬೇಕು. ಆಗ ವಿಷಕಾರಿಯಾದ ಈಗಿನ ತರಕಾರಿಯಿಂದ ಸ್ವಲ್ಪ ಮಟ್ಟಿಗಾದರೂ ಮುಕ್ತಿ ದೊರಕಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಲಪಾಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಭಂಡಾರಿ, ಭಾರತ್ ಬೀಡಿ ಉದ್ಯೋಗಿ ರಾಜೀವ್ ದೇವಿಪುರ ಉಪಸ್ಥಿತರಿದ್ದರು. ಶಿಶು ಮಂದಿರದ ವ್ಯವಸ್ಥಾಪಕ ನಾರಾಯಣ ಕಜೆ ಸ್ವಾಗತಿಸಿದರು. ಕಾರ್ಯದರ್ಶಿ ಚೇತನ್ ಪಿಲಿಕೂರ್ ವಂದಿಸಿದರು. ತಲಪಾಡಿ ದೇವಿಪುರ ಶಾಲೆಯ ಅಧ್ಯಾಪಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು.