Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಕನ್ನಡ ನಾಡು ನುಡಿಯನ್ನು ಬೆಳೆಸುವ ಕೆಲಸ ಆಗಬೇಕಿದೆ : ಡಾ.ಕೆ.ಎಸ್.ನಿಸಾರ್ ಅಹಮ್ಮದ್

UllalaVaniBy UllalaVaniApril 8, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ: 1968ರಲ್ಲಿ ಆಕಾಶವಾಣಿಗೆ ತುರ್ತಾಗಿ ಬರೆದ ನಿತ್ಯೋತ್ಸವ ಕವನಕ್ಕೆ ಅನಂತಸ್ವಾಮಿ ರೆಕ್ಕೆ ಪುಕ್ಕ ಕಟ್ಟಿ ತನಗೆ ಕೀರ್ತಿ ತಂದರು. ತಾನು ಬರೆದ ಹಲವು ಕವನಗಳಿಗೆ ಅವರು ಜೀವ ತುಂಬಿದರು. ಆ ಕಾರಣದಿಂದ ನಿತ್ಯೋತ್ಸವದಿಂದ ತನಗೆ ಬಂದ ಕೀರ್ತಿಯಲ್ಲಿ ಶೇ.50 ಅನಂತಸ್ವಾಮಿಗೆ ಸಲ್ಲುತ್ತದೆ. ಇಂದು ನಿತ್ಯೋತ್ಸವ ಎಲ್ಲರ ಮನದಲ್ಲೂ ನೆಲೆ ನಿಂತಿದೆ. ಸಾಹಿತ್ಯಾಭಿಮಾನಿಗಳು ತಾವು ಕಟ್ಟಿಸಿದ ಭವನಗಳಿಗೆ ಇದೇ ಹೆಸರು ಇಟ್ಟಿದ್ದಾರೆ. ಮಂಗಳೂರು ವಿವಿಯಲ್ಲಿ ಆರಂಭಗೊಂಡ ನಿತ್ಯೋತ್ಸವ ಕಾರ್ಯಕ್ರಮದ ಮೂಲಕ ಕನ್ನಡ ನಾಡು ನುಡಿಯನ್ನು ಬೆಳೆಸುವ ಕೆಲಸ ಆಗಬೇಕಿದೆ ಎಂದು ನಾಡೋಜ ಕವಿ ಡಾ.ಕೆ.ಎಸ್.ನಿಸಾರ್ ಅಹಮ್ಮದ್ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆ ಆಶ್ರಯದಲ್ಲಿ ಮಂಗಳವಾರ ಮಂಗಳಗಂಗೋತ್ರಿ ಮಂಗಳಾ ಸಭಾಂಗಣದಲ್ಲಿ ಕನ್ನಡ ನಾಡು, ನುಡಿ, ಚಿಂತನೆಯ ಕಾರ್ಯಕ್ರಮ `ನಿತ್ಯೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.

7mdp1

7mdp2

ಎಸ್.ವಿ. ಪರಮೇಶ್ವರ ಭಟ್ಟ ಅವರು ಕಷ್ಟ ಕಾಲದಲ್ಲೂ ಕನ್ನಡ ಸಂಸ್ಥೆಯನ್ನು ಕಟ್ಟಿ ಕನ್ನಡದ ಸರ್ವತೋಮುಖ ಅಭಿವೃದ್ಧಿಗಾಗಿ ಬಹಳಷ್ಟು ಪರಿಶ್ರಮವನ್ನು ವಹಿಸಿದವರು. ಆದರೆ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸಿಲ್ಲ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಯನ ವಿಭಾಗಕ್ಕೆ ಎಸ್‍ವಿಪಿ ಹೆಸರಿಡುವ ನೆನಪಿಸುವ ಕೆಲಸ ಮಾಡಲಾಗುತ್ತಿದ್ದು ಇದರಿಂದ ಎಸ್‍ವಿಪಿಗೆ ಗೌರವ ಸಲ್ಲಿಸುವ ಜೊತೆ ಮಂಗಳೂರು ವಿ.ವಿ.ಗೂ ಕೀರ್ತಿ ಬಂದಿದೆ ಎಂದು ಹೇಳಿದರು.

ಮುಖ್ಯ ಅತಿಥಿ ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿ, ಪ್ರತಿಯೊಬ್ಬರಿಗೂ ಜೀವನದಲ್ಲಿ ಕನಸು ಎಂಬುದು ಬಹಳ ಅಗತ್ಯ. ಇಂದು ಶಿಕ್ಷಣ ಎಂಬುದು ಕ್ರೀಯಾಶೀಲವಾಗಿರದೆ ಕೇವಲ ಕಿವಿಗೆ ಮಾತ್ರ ಸೀಮಿತವಾಗಿದ್ದು ವಿದ್ಯಾರ್ಥಿಗಳ ಕನಸನ್ನೂ ಕಿತ್ತುಕೊಂಡಿದೆ. ಇಂದು ಅದೆಷ್ಟೋ ಮಂದಿಗೆ ಆಕರ್ಷಕವಾಗಿ ಮಾತನಾಡುವುದೂ ಗೊತ್ತಿಲ್ಲ. ಈ ಕಾರಣದಿಂದಾಗಿ ಜಗತ್ತಿನ 400 ವಿವಿಗಳಲ್ಲಿ ಭಾರತದ ಒಂದು ವಿವಿ ಹೆಸರೂ ಇಲ್ಲ. ವಿದ್ಯಾರ್ಥಿಗಳು ಫೇಲಾದ ಸಂದರ್ಭ ಅದನ್ನು ಸಮರ್ಥಿಸಬಹುದೇ ಹೊರತು ಅದು ವಾಸ್ತವ ಆಗಿರಲು ಸಾಧ್ಯವಿಲ್ಲ ಎಂದರು.

ಇಂದು ಜಗತ್ತು ಸ್ವಾರ್ಥ ಕೇಂದ್ರೀಕೃತವಾಗಿದ್ದು ಪ್ರತಿಯೊಬ್ಬರು ತಾನು, ಕುಟುಂಬ ಎನ್ನುವ ಚಿಂತನೆಯಿಂದ ಹೊರಬಂದು ಇರುವುದರಲ್ಲಿ ಸಮಾಜಕ್ಕೂ ಹಂಚುವ ಕೆಲಸ ಮಾಡಬೇಕಿದೆ. ಪ್ರತಿಭೆ ಎನ್ನುವುದು ಕೇವಲ ಸಂಗ್ರಹಕ್ಕೆ ಸೀಮಿತವಾಗಿದೆ. ಇದನ್ನು ಗಮನಿಸುವಾಗ ಸಂಶೋಧನೆ ಎನ್ನುವ ಪದ ಮುಂದಿನ ದಿನಗಳಲ್ಲಿ ಅಳಿದರೂ ಆಶ್ಚರ್ಯವಿಲ್ಲ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎಸ್‍ವಿಪಿ ಅವರ ಪುತ್ರ ಎಸ್.ಪಿ.ರಾಮಚಂದ್ರ ಅವರು ಎಸ್‍ವಿಪಿ ಸಂಗ್ರಹದಲ್ಲಿದ್ದ ಪುಸ್ತಕಗಳು, ಪುರಸ್ಕಾರ ಫಲಕಗಳನ್ನು ವಿವಿ ಗ್ರಂಥಾಲಯಕ್ಕೆ ಹಸ್ತಾಂತರಿಸುವ ಪತ್ರ ನೀಡಿದರು. ಸೋಮವಾರ ಅಪಘಾತದಲ್ಲಿ ಮೃತಪಟ್ಟ ವಿವಿ ಸಮ್ಮರ್ ಕ್ಯಾಂಪ್‍ನ ಎಂಪಿಎಡ್ ವಿದ್ಯಾರ್ಥಿ ಶಂಕರ್ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಪ್ರೊ.ಪಿ.ಎಸ್.ಯಡಪಡಿತ್ತಾಯ ಉಪಸ್ಥಿತರಿದ್ದರು. ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರೊ.ಬಿ.ಶಿವರಾಮ ಶೆಟ್ಟಿ ಸ್ವಾಗತಿಸಿದರು. ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

ಸೌಹಾರ್ದಕ್ಕೆ ಸಾಕ್ಷಿಯಾದ ಪಿಲಾರು ನಾಗಬ್ರಹ್ಮ ಕ್ಷೇತ್ರ ವಾರ್ಷಿಕೋತ್ಸವ

February 3, 2026
Leave A Reply

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

By UllalaVaniFebruary 5, 20260

ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026
1 2 3 … 1,793 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d