UN NETWORKS
ಬಂಟ್ವಾಳ: ಜಮ್ಮು ಕಾಶ್ಮೀರದಲ್ಲಿ ಹಾಗೂ ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನ ಖಂಡಿಸಿ ಬಂಟ್ವಾಳ ತಾಲೂಕಿನ ಗಡಿಯಾರದ ಇತಿಕಾಫ್ ಮೀಲಾದ್ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಗಡಿಯಾರ ಜಂಕ್ಷನ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಭಿತ್ತಿಚಿತ್ರಗಳನ್ನ ಹಿಡಿದು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಇದೇ ವೇಳೆ ಝೈನುಲ್ ಅಕ್ಬರ್, ಹಮೀದ್ ದಾರಿಮಿ ಸಂಪ್ಯ, ರಶೀದ್ ಸಖಾಫಿ ಗಡಿಯಾರ ಮಾತನಾಡಿದರು. ಪ್ರತಿಭಟನೆಯಲ್ಲಿ
ಅಬ್ದುಲ್ ಮಜೀದ್ ದಾರಿಮಿ, ಸ್ವಾದೀಕ್ ಮುಹಿನಿ, ಸಿದ್ದೀಕ್ ಫೈಝಿ ಉಪಸ್ಥಿತರಿದ್ದರು. ಜೊತೆಗೆ ಇತಿಕಾಫ್ ಮೀಲಾದ್ ಕಮಿಟಿಯ ಪದಾಧಿಕಾರಿಗಳಾದ ಅಬ್ದುಲ್ ರಶೀದ್ ಗಡಿಯಾರ, ಅಬ್ದುಲ್ ಅಝೀಝ್ ಗಡಿಯಾರ, ಹೈದರ್ ವಿದ್ಯಾನಗರ, ಅಲ್ತಾಫ್ ವಿದ್ಯಾನಗರ, ನೌರೂಶ್ ವಿದ್ಯಾನಗರ, ನಿಝಾಂ, ಸಲ್ಮಾನ್ ಜೋಗಿಬೆಟ್ಟು ಸೇರಿ ಸ್ಥಳೀಯರು ಉಪಸ್ಥಿತರಿದ್ದರು.