UN NETWORKS
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯು ತುಮಕೂರು, ಹಾಸನ, ಕೊಡಗು, ದ.ಕ.ಜಿಲ್ಲೆಗಳ ಕಾಂಗ್ರೇಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾ ಉಸ್ತುವಾರಿ ವೀಕ್ಷಕರಾಗಿ ಉತ್ತಮ ವಾಗ್ಮಿ, ಸಂಘಟಕ ಹಾಗೂ ದ.ಕ.ಜಿಲ್ಲಾ ಕಾಂಗ್ರೇಸ್ ಪಕ್ಷದ ಜಿಲ್ಲಾ ವಕ್ತಾರ ರೂ ಆಗಿದ್ದ ಫಾರೂಕ್ ಉಳ್ಳಾಲ್ ರನ್ನು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ರಾದ ಡಿ.ಕೆ.ಶಿವಕುಮಾರ್ ನೇಮಕಾತಿ ಗೊಳಿಸಿ ಆದೇಶ ಪತ್ರ ನೀಡಿದ್ದಾರೆ.
ತನಗೆ ಪಕ್ಷದ ವರಿಷ್ಠರು ನೀಡಿರುವ ಹೊಣೆಗಾರಿಕೆಯ ಸಲುವಾಗಿ ಫಾರೂಕ್ ಉಳ್ಳಾಲ್ ಈಗಾಗಲೇ ಕರ್ತವ್ಯ ನಿರತರಾಗಿದ್ದಾರೆ ಕೂಡಾ.