UN NETWORKS
ಉಳ್ಳಾಲ: ಕಾರ್ಯಗಾರಗಳ ಮೂಲಕ ಜ್ಞಾನ ವೃದ್ಧಿಸುವುದರ ಜತೆಗೆ ಪರಸ್ಪರ ಜ್ಞಾನ ಹಂಚಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ನಿಮ್ಹಾನ್ಸ್ ನ ಸೈಕೋಫಾರ್ಮಕಾಲಜಿ ವಿಭಾಗ ಮುಖ್ಯಸ್ಥ ಡಾ| ಚಿತ್ತರಂಜನ್ ಅಂದ್ರಾಡೆ ಅಭಿಪ್ರಾಯಪಟ್ಟರು.
ಕಿಟಮೈನ್ ಅನಸ್ತೇಷಿಯಾ ವಿಭಾಗದಲ್ಲಿ ಹೆಚ್ಚು ಬಳಕೆ ಮಾಡಲಾಗುತ್ತಿದ್ದು, ಖಿನ್ನತೆಗೆ ಒಳಗಾದವರನ್ನು ನಿಯಂತ್ರಿಸಲು ಕಿಟಮೈನ್ ಬಳಕೆ ಮಾಡಲಾಗುತ್ತಿದೆ. ಆದರೆ ಕಿಟಮೈನ್ ಕುರಿತ ಅಪಪ್ರಚಾರಗಳು ಹೆಚ್ಚಿದ್ದು, ಈ ಕುರಿತು ವಿದ್ಯಾರ್ಥಿಗಳಲ್ಲಿ ಹಾಗೂ ವೈದ್ಯರಲ್ಲಿ ಹೆಚ್ಚಿನ ಜ್ಞಾನ ಅಗತ್ಯ ಇರಬೇಕಿದೆ ಎಂದರು.
ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಡೀನ್ ಡಾ|ಪಿ.ಯಸ್. ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು.
ಸಹ ಡೀನ್ ಡಾ| ಜಯಪ್ರಕಾಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕ ಡಾ| ಶಿವಕುಮಾರ್ ಹಿರೇಮಠ, ನಿಟ್ಟೆ ಮನೋವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಸತೀಶ್ ರಾವ್ ಉಪಸ್ಥಿತರಿದ್ದರು.
ಡಾ| ಶ್ರೀನಿವಾಸ್ ಸ್ವಾಗತಿಸಿದರು. ಡಾ| ಶಿಶಿರ್ ಕುಮಾರ್ ವಂದಿಸಿದರು.