UN NETWORKS
ಉಳ್ಳಾಲ: ಮಂಗಳೂರಿನಿಂದ ಸಕಲೇಶಪುರಕ್ಕೆ ತೆರಳುತ್ತಿದ್ದ ಇನೋವಾ ಕಾರು ಮೂಡಿಗೆರೆ ತಾಲೂಕಿನ ಕೃಷ್ಣಾಪುರದ ರಾ.ಹೆ. ಯಲ್ಲಿ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಆರು ಮಂದಿಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗಂಭೀರ ಗಾಯಗೊಂಡಿರುವ ಇಸ್ಮಾಯಿಲ್(60), ತಮ್ಸಿಯಾ(40), ಅಯಾನ್(10), ತನೀಸ್(16), ಸೀದಾ(16) ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.