UN NETWORKS
ಮಂಗಳೂರು: ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ನಗರದ ಮೇರಿಹಿಲ್ನಲ್ಲಿರುವ ಗೃಹರಕ್ಷಕ ದಳದ ಕಚೇರಿಯಲ್ಲಿ ಮಂಗಳವಾರ ಗಿಡ ನೆಡುವ ಕಾರ್ಯಕ್ರಮ ಜರುಗಿತು.
ಉಪಸಮಾದೇಷ್ಟ ಶ್ರೀ ರಮೇಶ್, ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್ಶೇರಾ, ಹಿರಿಯ ಗೃಹರಕ್ಷಕ ರಮೇಶ್ ಭಂಡಾರಿ, ರಾಜಶ್ರೀ, ಲೀಲಾ ಕುಕ್ಯಾನ್, ಕೇಶವ ಸೇರಿದಂತೆ 80 ಮಂದಿ ಗೃಹರಕ್ಷಕರು ಉಪಸ್ಥಿತರಿದ್ದರು.