UN NETWORKS
ಮಂಗಳೂರು: ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಹಾಗೂ ನಾಗರೀಕ ಸರಬರಾಜು ಸಚಿವರಾಗಿದ್ದ ಯು.ಟಿ.ಖಾದರ್ ಕರ್ನಾಟಕ ವಿಧಾನಸಭೆ ಚುನಾವಣೆ 2018ರಲ್ಲಿ ಜಯಭೇರಿ ಬಾರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕುತೂಹಲ ಕೆರಳಿಸಿರುವ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಯು ಟಿ ಖಾದರ್ ಗೆಲುವು ಸಾಧಿಸಿರುವುದಕ್ಕೆ ಹರ್ಷ ವ್ಯಕ್ತವಾಗುತ್ತಿದೆ. ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದ ಸಚಿವ ಯು.ಟಿ.ಖಾದರ್ ಈ ಬಾರಿ ಅಧಿಕ ಮತಗಳ ಅಂತರದಿಂದ ಗೆದ್ದು ವಿಜಯದ ನಗೆ ಬೀರಿದ್ದಾರೆ. ಸಚಿವ ಯು ಟಿ ಖಾದರ್ ತಮ್ಮ ಕ್ಷೇತ್ರದ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದು, ಅವರ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಕಾರಣವಾಗಿದೆ.
ಈ ಬಾರಿ ಸಂತೋಷ್ ರೈ ಬೋಳಿಯಾರ್ ವಿರುದ್ಧ ಕಣಕ್ಕೆ ಇಳಿದಿದ್ದ ಸಚಿವ ಯು.ಟಿ ಖಾದರ್ ಅವರು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
2013 ರ ಚನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯ ಎದುರು ಯು. ಟಿ ಖಾದರ್ ಸುಮಾರು 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಿದ್ದರು. ಇದೀಗ 2018 ರ ಚುನಾವಣಾ ಫಲಿತಾಂಶವೂ ಕಾಂಗ್ರೆಸ್ ಪರವಾಗಿದೆ.